ಮಡಿಕೇರಿ: ದುಬಾರೆಯ ಆನೆ ಕ್ಯಾಂಪಿನಲ್ಲಿ ಮಹಿಳೆ ಮತ್ತು ಸಾಕಾನೆಯೊಂದು ಮೃತಪಟ್ಟ ಪ್ರಕರಣದಲ್ಲಿ ಇಬ್ಬರು ಅರಣ್ಯಾಧಿಕಾರಿಗಳ ವಿರುದ್ಧ ಉಪಲೋಕಾಯುಕ್ತರು ಸ್ವಯಂಪ್ರೇರಿತ ದೂರು ದಾಖಲು ಮಾಡಿಕೊಂಡಿದ್ದಾರೆ.
ಸೋಮವಾರಪೇಟೆಯ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ್ ಎ., ಕುಶಾಲನಗರ ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ರಕ್ಷಿತ್ ಅವರ ವಿರುದ್ಧ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ. ಎನ್. ಫಣೀಂದ್ರ ಪ್ರಕರಣ ದಾಖಲು ಮಾಡಿರುವುದಾಗಿದೆ.
ಕೆಲ ದಿನಗಳ ಹಿಂದೆ ದುಬಾರೆಯಲ್ಲಿ ಎರಡು ಆನೆಗಳ ನಡುವೆ ಭೀಕರ ಕಾದಾಟ ನಡೆದಿದ್ದು, ಇದರಲ್ಲಿ ತಮಿಳುನಾಡಿನ ಪ್ರವಾಸಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಈ ಘಟನೆಯಲ್ಲಿ ಕಾದಾಟ ನಡೆಸಿದ ಸಾಕಾನೆ ಮಾರ್ತಾಂಡ ಸಹ ಗಂಭೀರ ಗಾಯಗೊಂಡ ಪರಿಣಾಮ ಮೃತಪಟ್ಟಿತ್ತು. ಅರಣಾಯಾಧಿಕಾರಿಗಳ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂದು ಉಪ ಲೋಕಾಯುಕ್ತರು ಆರೋಪಿಸಿರುವುದಾಗಿದೆ.
ದುಬಾರೆ ಸಾಕಾನೆ ಶಿಬಿರದಲ್ಲಿ ಸಾಕಷ್ಟು ಗಂಭೀರ ಸಮಸ್ಯೆಗಳಿದ್ದು ಅವುಗಳನ್ನು ಶೀಘ್ರ ಪರಿಹರಿಸಬೇಕಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
























