ಬಿಜೆಪಿಗೆ 150 ಸ್ಥಾನ : ಸಚಿವ ಕೋಟ ವಿಶ್ವಾಸ

ಕೇಂದ್ರ, ರಾಜ್ಯದ ಜನಪರ ಯೋಜನೆಗಳೇ ಶ್ರೀರಕ್ಷೆ

ಭಟ್ಕಳ : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರ್ಕಾರಗಳ ಜನಪರ ಯೋಜನೆಗಳಿಂದಲೇ ಬಿಜೆಪಿ 150ಕ್ಕೂ ಅಧಿಕ ಸ್ಥಾನ ಗೆದ್ದು ಬಹುಮತ ಪಡೆಯಲಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಮುರ್ಡೇಶ್ವರದಲ್ಲಿ ಏರ್ಪಡಿಸಿದ್ದ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ ಉದ್ಘಾಟಿಸಿ ಮಾತನಾಡಿದರು.
ಮುರ್ಡೇಶ್ವರದಲ್ಲಿ ನಡೆದ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ ಮಹತ್ವದ್ದಾಗಿದೆ. ಇಲ್ಲಿಂದಲೇ ಮುಂಬರುವ ಚುನಾವಣೆಯಲ್ಲಿ ಹೆಚ್ಚಿನ ಬಹುಮತ ಪಡೆಯುವ ದೃಢ ಸಂಕಲ್ಪ ಮಾಡಲಾಗುತ್ತಿದೆ. ಬಿಜೆಪಿ ಸರ್ಕಾರದ ಸಾಧನೆ ಕುರಿತು ಬಿಜೆಪಿ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಪ್ರತಿ ಮನೆಗೆ ತೆರಳಿ ತಿಳಿಬೇಕು ಎಂದರು.
ಕೇಂದ್ರ ಸರ್ಕಾರದ ಕಿಸಾನ್‌ ಸಮ್ಮಾನ್‌, ಆಯುಷ್ಮಾನ್‌ ಭಾರತ ಹಾಗೂ ರಾಜ್ಯ ಸರ್ಕಾರದ ವಿವಿಧ ಜನಪರ ಯೋಜನೆಗಳಿಂದ ಕೋಟ್ಯಂತರ ಜನರಿಗೆ ಅನುಕೂಲವಾಗಿದೆ. ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ, ಹಿಂದುಳಿದವರು, ರೈತರು, ದಲಿತರು, ಮೀನುಗಾರರು, ನೇಕಾರರು, ಟೈಲರ್‌ಗಳಿಗೆ ಮಹತ್ವದ ಯೋಜನೆಗಳನ್ನು ಜಾರಿಗೆಗೊಳಿಸಿ ಅನುಕೂಲ ಮಾಡಿಕೊಟ್ಟಿದೆ ಎಂದು ಅವರು ಹೇಳಿದರು.
ಬಿಜೆಪಿ ಸರ್ಕಾರ ರಾಜ್ಯದ ಗ್ರಾಪಂ ಸದಸ್ಯರು, ಅಧ್ಯಕ್ಷರು, ಉಪಾಧ್ಯಕ್ಷರಿಗೆ ಹೆಚ್ಚಿನ ಗೌರವಧನ ವಿತರಿಸಿದ್ದು, ಇತ್ತೀಚೆಗೆ 138 ಕೋಟಿ ಬಿಡುಗಡೆಗೊಳಿಸಿ ಪಂಚಾಯತ್‌ ಸದಸ್ಯರ ಮತ್ತಷ್ಟು ಸೇವೆಗೆ ಅನುಕೂಲ ಮಾಡಿಕೊಡಲಾಗಿದೆ ಎಂದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top