ಬೀಗ ಮುರಿದು ಒಳಪ್ರವೇಶಿಸಿದ ಅಧಿಕಾರಿಗಳು?! ಮತ ಎಣಿಕೆ ಆರಂಭ | ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಮುನ್ನಡೆ

ಪುತ್ತೂರು: ಮತಗಟ್ಟೆ ಕೊಠಡಿಯ ಬೀಗ ಮರೆತು ಬಂದದ್ದರಿಂದ ಮತಗಟ್ಟೆ ಕೊಠಡಿಯ ಬೀಗವನ್ನು ಒಡೆದು ಒಳಪ್ರವೇಶಿಸಿದ ವಿಲಕ್ಷಣ ಘಟನೆಗೆ ಮಂಗಳೂರು ಸಾಕ್ಷಿಯಾಯಿತು ಎಂದು ತಿಳಿದುಬಂದಿದೆ. ಬಳಿಕ ನಡೆದ ಅಂಚೆ ಮತ ಎಣಿಕೆಯಲ್ಲಿ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಮುನ್ನಡೆ ಕಾಯ್ದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸುರತ್ಕಲ್ ಎನ್.ಐ.ಟಿ.ಕೆ. ಆವರಣದಲ್ಲಿ ನಡೆಯುತ್ತಿರುವ ಮತ ಎಣಿಕೆಗಾಗಿ ಎಲ್ಲರೂ ಬಂದು ಸೇರಿದ್ದರು. ಅಷ್ಟರಲ್ಲಿ ಅಧಿಕಾರಿಯೋರ್ವರು ಕೀ ಮರೆತು ಬಂದಿರುವುದು ಬೆಳಕಿಗೆ ಬಂದಿತು. ಪುನಃ ಹಿಂದಿರುಗಿ ಕೀ ತರುವಷ್ಟು ಸಮಯ ಇಲ್ಲದೇ ಇರುವುದರಿಂದ ಬಾಗಿಲಿನ ಕೀಯನ್ನು ಮುರಿದು ಒಳಪ್ರವೇಶಿಸಲಾಯಿತು. ಬಳಿಕ ಮತ ಎಣಿಕೆ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು ಎಂದು ಹೇಳಲಾಗಿದೆ.

ಅಂತೂ ಮತ ಎಣಿಕೆ ಪ್ರಕ್ರಿಯೆಗೆ ಯಾವುದೇ ತೊಂದರೆ ಆಗದಂತೆ ಅಧಿಕಾರಿಗಳು ಕಾರ್ಯಕ್ಷಮತೆ ಮೆರೆದರು.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top