ಬಜರಂಗ ದಳ ದೂಷಿಸಿದ ಖರ್ಗೆಗೆ ಕೋರ್ಟ್‌ ನೋಟಿಸ್‌ | ಖರ್ಗೆ ವಿರುದ್ಧ ದಾಖಲಾಗಿದೆ 100 ಕೋ. ರೂ. ಮಾನನಷ್ಟ ಮೊಕದ್ದಮೆ

ಹೊಸದಿಲ್ಲಿ : ಬಜರಂಗದಳವನ್ನು ಪಿಎಫ್​ಐ ಜತೆ ಹೋಲಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಕೋರ್ಟ್​ ಸಮನ್ಸ್ ನೀಡಿದೆ. ​​ಬಜರಂಗದಳ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಅವರಿಗೆ ಪಂಜಾಬ್‌ನ ಸಂಗ್ರೂರ್ ನ್ಯಾಯಾಲಯ ಸೋಮವಾರ ಸಮನ್ಸ್ ಜಾರಿ ಮಾಡಿದೆ. ಖರ್ಗೆಯವರು ಈ ಹಿಂದೆ ಬಜರಂಗದಳ ಸಂಘಟನೆಯನ್ನು ಪಿಎಫ್‌ಐ ಜತೆ ಹೋಲಿಕೆ ಮಾಡಿದ್ದರು.

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಿಶ್ವ ಹಿಂದೂ ಪರಿಷತ್‌ ಚಂಡೀಗಡ ಘಟಕ 100 ಕೋಟಿ ರೂ. ಮಾನಹಾನಿ ಪರಿಹಾರ ಕೋರಿ ನೋಟಿಸ್‌ ಜಾರಿ ಮಾಡಿತ್ತು.

ಜಾತಿ ಮತ್ತು ಧರ್ಮದ ಆಧಾರದ ಮೇಲೆ ಸಮಾಜದಲ್ಲಿ ದ್ವೇಷ ಹರಡುತ್ತಿರುವ ಆರೋಪ ಎದುರಿಸುತ್ತಿರುವ ಬಜರಂಗದಳ, ಪಿಎಫ್‌ಐ ಮುಂತಾದ ಸಂಘಟನೆಗಳನ್ನು ನಿಷೇಧಿಸುವುದಾಗಿ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಹೇಳಿತ್ತು. ಬಜರಂಗದಳವನ್ನು ಪಿಎಫ್‌ಐ, ಸಿಮಿ ಮುಂತಾದ ನಿಷೇಧಿತ ಸಂಘಟನೆಗಳ ಜತೆ ಹೋಲಿಸಿರುವುದು ಮಾನಹಾನಿಕರ ಎಂದು ವಿಎಚ್‌ಪಿ ಪರ ವಕೀಲರು ನೋಟಿಸ್‌ನಲ್ಲಿ ದೂರಿದ್ದರು, ಆದರೆ ಬಗ್ಗೆ ಕಾಂಗ್ರೆಸ್ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.





























 
 

ತನ್ನ ಯುವ ಘಟಕವಾದ ಬಜರಂಗದಳಕ್ಕೆ ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಅಪಮಾನ ಮಾಡಲಾಗಿದೆ ಎಂದು ‘ವಿಎಚ್‌ಪಿ’ ಆರೋಪಿಸಿದೆ. ವಿಶ್ವ ಹಿಂದೂ ಪರಿಷತ್‌ನ ಚಂಡೀಗಡ ಘಟಕ ಮತ್ತು ಅದರ ಯುವ ಘಟಕ ಬಜರಂಗ ದಳ ಮೇ 4ರಂದು ನೋಟಿಸ್ ಜಾರಿ ಮಾಡಿದ್ದು, 14 ದಿನಗಳ ಒಳಗೆ 100.10 ಕೋಟಿ ರೂ. ಪರಿಹಾರ ನೀಡುವಂತೆ ಒತ್ತಾಯಿಸಿತ್ತು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top