ಖಾಸಗಿ ಬಸ್- ಬೈಕ್ ಡಿಕ್ಕಿ : ಬೈಕ್ ಸವಾರ ಮೃತ್ಯು

ಮೂಡಬಿದಿರೆ: ಮಂಗಳೂರು -ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ಮೂಡುಬಿದಿರೆ ಸಮೀಪದ ತೋಡಾರಿನ ಹಂಡೇಲು ಎಂಬಲ್ಲಿ ಬೈಕ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮೃತ ವಿದ್ಯಾರ್ಥಿಯನ್ನು ಎಡಪದವು ರಾಜೇಶ್ವರಿ ಜ್ಯುವೆಲರ್ಸ್‌ ಚಂದ್ರಹಾಸ ಆಚಾರ್ಯ ಅವರ ಪುತ್ರ ,ಆಳ್ವಾಸ್ ಕಾಲೇಜಿನ ಪ್ರಥಮ ಬಿಸಿಎ ವಿದ್ಯಾರ್ಥಿ ಕಾರ್ತಿಕ್ ಆಚಾರ್ಯ (19) ಗುರುತಿಸಲಾಗಿದೆ.

ಸಹಸವಾರ ಅದೇ ಕಾಲೇಜಿನ ವಿದ್ಯಾರ್ಥಿ ಹರ್ಷ ಎಂಬವರು ಅಲ್ಪಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ. ಕಾರ್ತಿಕ್ ಅವರು ಕಾಲೇಜು ಮುಗಿಸಿ ತನ್ನ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಮಂಗಳೂರಿನಿಂದ ಮೂಡುಬಿದಿರೆಗೆ ಬರುತ್ತಿದ್ದ ಖಾಸಗಿ ಎಕ್ಸ್ ಪ್ರೆಸ್ ಬಸ್ ಮತ್ತೊಂದು ಬಸ್ಸನ್ನು ಓವರ್‌ಟೇಕ್ ಮಾಡುವ ಭರದಲ್ಲಿ ತೀರ ಬಲಭಾಗಕ್ಕೆ ಚಲಿಸಿ ಬೈಕ್‌ಗೆ ಡಿಕ್ಕಿ ಹೊಡೆದಿದೆ.





















































 
 

ಬಸ್ ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.ಮೂಡುಬಿದಿರೆ ಪೊಲೀಸರು ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top