ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜೀರ್ಣೋದ್ಧಾರ ಹಿನ್ನೆಲೆಯಲ್ಲಿ ಶ್ರೀ ದೇವರಿಗೆ ಅನುಜ್ಞಾ ಕಲಶ

ಸವಣೂರು : ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲುವ ಏಕೈಕ ದೇವಸ್ಥಾನ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜೀರ್ಣೋದ್ಧಾರದ ಪೂರ್ವಭಾವಿಯಾಗಿ ಶ್ರೀ ದೇವರಿಗೆ ಅನುಜ್ಞಾ ಕಲಶವು ಜೂ.14 ರಂದು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.

ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ದೇವತಾ ಪ್ರಾರ್ಥನೆ, ಆಚಾರ್ಯವರಣೆ,ಸ್ವಸ್ತಿ ಪುಣ್ಯಾಹ ವಾಚನ ,ಶ್ರೀ ಮಹಾಗಣಪತಿ ಹೋಮ,ಅನುಜ್ಞಾ ಕಲಶ ಪೂಜೆ, ಮಧ್ಯಾಹ್ನ 11.10ರಿಂದ ಸಿಂಹ ಲಗ್ನ ಶುಭ ಮುಹೂರ್ತದಲ್ಲಿ ಶ್ರೀ ದೇವರಿಗೆ ಅನುಜ್ಞಾ ಪ್ರಾರ್ಥನೆ, ಅನುಜ್ಞಾ ಕಲಶಾಭಿಷೇಕ ನಡೆಯಿತು.

ಮಧ್ಯಾಹ್ನ  ಮಹಾಪೂಜೆ,ಪ್ರಸಾದ ವಿತರಣೆ ,ಅನ್ನಸಂತರ್ಪಣೆ ನಡೆಯಿತು.





































 
 

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ನಳೀಲು , ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಪುರುಷೋತ್ ಭಟ್ ಕಾರ್ಮಟ್ ಮುಂಬೈ ,ಅಧ್ಯಕ್ಷ ನವೀನ್ ಚಂದ್ರ ರೈ,ಅರ್ಚಕ ರಾಘವೇಂದ್ರ ಪಿ.ಮೂಡಿತ್ತಾಯ,ಮೊಕ್ತೇಸರರಾದ ಶ್ರೀನಿವಾಸ್ ಹೆಬ್ಬಾರ್,ಎನ್.ನಾರಾಯಣ ರೈ ಮೊದಲ್ಕಾಡಿ,ಎನ್.ಚಂದ್ರಶೇಖರ್ ರೈ, ಮೋಹನ್ ದಾಸ್ ರೈ ,ಡಾ.ಸುಚೇತಾ ಜೆ.ಶೆಟ್ಟಿ,ಕಿಶೋರ್ ಕುಮಾರ್ ರೈ,ಅರುಣ್ ಕುಮಾರ್, ಸತೀಶ್ ರೈ, ಪ್ರವೀಣ್ ಕುಮಾರ್ ಹಾಗೂ ಪ್ರಮುಖರು, ಭಕ್ತಾದಿಗಳು ಉಪಸ್ಥಿತರಿದ್ದರು.

ಹುತ್ತಕ್ಕೆ ಪೂಜೆ ಸಲ್ಲುವ ತಾಲೂಕಿನ ಏಕೈಕ ಕ್ಷೇತ್ರ

ನಳೀಲು ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹುತ್ತಕ್ಕೆ ಆರಾಧನೆ ನಡೆಯುತ್ತದೆ.ಆದರಿಂದ ಇದು ಭಕ್ತರ ಪಾಲಿನ ಶ್ರದ್ಧೆಯ ಹಾಗೂ ಭಕ್ತಿಯ ಕ್ಷೇತ್ರವಾಗಿದೆ.ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಸೇವೆ ಪಡೆಯುವ ಏಕೈಕ ಕ್ಷೇತ್ರವಾಗಿರುವ ಇಲ್ಲಿ ಕಂಕಣ ಭಾಗ್ಯಕ್ಕಾಗಿ, ಸಂತಾನ ಭಾಗ್ಯಕ್ಕೆ ಉದ್ಯೋಗ, ಇಷ್ಟಾರ್ಥ ಸಿದ್ದಿಗೆ,ವಿದ್ಯೆಗಾಗಿ ಪೂಜೆ ಸಲ್ಲಿಸಿದರೆ ಫಲ ಪ್ರಾಪ್ತಿ ಆಗುತ್ತದೆ ಎಂಬ ನಂಬಿಕೆ ಭಕ್ತರಲ್ಲಿದೆ.

ಇಲ್ಲಿ ಹುತ್ತದ ರೂಪದಲ್ಲಿರುವ ಸುಬ್ರಹ್ಮಣ್ಯನಿಗೆ ರಂಗಪೂಜೆ,ಹೂವಿನ ಪೂಜೆ,ರಾಹು ಜಪ,ಆಶ್ಲೇಷ ಬಲಿ,ಕುಂಕುಮಾರ್ಚಣೆ,ಕಾರ್ತಿಕ ಪೂಜೆ ನಾಗನ ಕಟ್ಟೆಯಲ್ಲಿ ನಾಗತಂಬಿಲ ಹಾಗೂ ಇತರ ಸೇವೆಗಳಾದ ಆಶ್ಲೇಷ ಬಲಿ,ಸರ್ಪ ಸಂಸ್ಕಾರ,ನವಗ್ರಹ ಶಾಂತಿ ಹೋಮ ನಡೆಯುತ್ತದೆ.

2024 ಫೆ.17ರಿಂದಫೆ.24ರವರೆಗೆ ಈ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ

2024 ಫೆ.17ರಿಂದಫೆ.24ರವರೆಗೆ ಈ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ಹಾಗೂ ಜಾತ್ರೋತ್ಸವ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಈ ನಿಟ್ಟಿನಲ್ಲಿ ಕ್ಷೇತ್ರದಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳು ನಡೆಯಲಿದೆ. ದೇವಸ್ಥಾನಕ್ಕೆ ಆವರಣ ,ದೇವಸ್ಥಾನದ ಛಾವಣಿಗೆ ತಾಮ್ರದ ಹೊದಿಕೆ,ನೂತನ ವಸಂತ ಮಂಟಪ ನಿರ್ಮಾಣ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳು ನಡೆಯಲಿದೆ. ಭಕ್ತಾದಿಗಳು ಈ ಪುಣ್ಯ ಕಾರ್ಯದಲ್ಲಿ ಭಾಗಿಯಾಗಬೇಕು ಎಂದು ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ನಳೀಲು ತಿಳಿಸಿದ್ದಾರೆ

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top