ಔಷಧೀಯ ಸಸ್ಯಗಳ ಸಂರಕ್ಷಣೆಯ ಕಾರ್‍ಯಕ್ರಮ “ವಿವೇಕ ಸಂಜೀವಿನಿ”

ಪುತ್ತೂರು : ಭಾರತೀಯ ಸಂಸ್ಕೃತಿಯಲ್ಲಿ ಪರಂಪರಾನುಗತವಾಗಿ ಗಿಡಮೂಲಿಕೆಯ ಉಪಚಾರವನ್ನು ನಡೆಸಿಕೊಂಡು ಬರಲಾಗುತ್ತಿದೆ. ಆದರೆ, ಆಧುನಿಕ ವೈದ್ಯ ಪದ್ಧತಿಯ ಪ್ರಭಾವ ಮತ್ತು ವಿದೇಶಿ ಸಂಸ್ಕೃತಿಯ ಪ್ರವೇಶದಿಂದಾಗಿ ಸಾಂಪ್ರದಾಯಿಕ ಔ?ಧೀಯ ವ್ಯವಸ್ಥೆ ಅವನತಿಯ ಭೀತಿ ಎದುರಿಸುತ್ತಿದೆ ಎಂದು ಕಾಲೇಜಿನ ಪ್ರಿನ್ಸಿಪಾಲ್ ಪ್ರಸಾದ್ ಶ್ಯಾನಭಾಗ್ ಹೇಳಿದರು.

ಅವರು ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ಔಷಧೀಯ ಸಸ್ಯಗಳ ಸಂರಕ್ಷಣೆ ವಿವೇಕ ಸಂಜೀವಿನಿ ಕಾರ್‍ಯಕ್ರಮದಲ್ಲಿ ಮಾತನಾಡಿದರು.

ಸಾಂಪ್ರದಾಯಿಕವಾಗಿ ಬಳಸಲಾಗುತ್ತಿದ್ದ ಗಿಡಮೂಲಿಕೆಗಳೂ ನಶಿಸಿ ಹೋಗುತ್ತಿವೆ. ಈ ನಿಟ್ಟಿನಲ್ಲಿ ಔಷಧೀಯ ಸಸ್ಯ ಸಂಕುಲದ ಸಂರಕ್ಷಣೆಯ ಉದ್ದೇಶದ ಜೊತೆಗೆ ಸಸ್ಯಗಳ ಕುರಿತಾಗಿ ಮಾಹಿತಿ ದಾಖಲೀಕರಣ ಹಾಗೂ ಜಾಗೃತಿ ಮೂಡಿಸುವ ಸಲುವಾಗಿ ಈ ಆಂದೋಲನವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.





































 
 

ಈ ಸಂದರ್ಭದಲ್ಲಿ ಕಾಲೇಜಿನ ಆವರಣದಲ್ಲಿ ಎಲ್ಲಾ ವಿದ್ಯಾರ್ಥಿಗಳು ಔಷಧೀಯ ಗಿಡಗಳನ್ನು ನೆಟ್ಟು, ಅವುಗಳನ್ನು ಪೋಷಿಸುವ ಹವ್ಯಾಸವನ್ನು ಇಂದಿನ ವಿದ್ಯಾರ್ಥಿಗಳಲ್ಲಿ ರೂಢಿಸಿಕೊಳ್ಳಲು ಜಾಗೃತಿ ಮೂಡಿಸಲಾಯಿತು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top