ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಸ್ಧಾನಕ್ಕೆ ನಳೀನ್ ಕುಮಾರ್ ಕಟೀಲ್ ರಾಜೀನಾಮೆ

ಬಳ್ಳಾರಿ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸದಸ್ಯರಾಗಿರುವ ನಳಿನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಶನಿವಾರ ಬಳ್ಳಾರಿಯಲ್ಲಿ ಮಾತನಾಡಿದ ಅವರು, ಚುನಾವಣೆ ಸೋಲಿನ ಬಳಿಕ ನೈತಿಕ ಹೊಣೆ ಹೊತ್ತು ಲಿಖಿತ ಮತ್ತು ಮೌಖಿಕವಾಗಿ ನಾನು ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದರು.

ನನ್ನ ಅವಧಿ ಮುಗಿದಿದ್ದು, ಸಹಜವಾಗಿ ಬದಲಾವಣೆ ನಡೆಯುತ್ತದೆ. ಎರಡು ಅವಧಿ ನಾನು ಪೂರ್ಣಗೊಳಿಸಿದೆ. ಅನಿರೀಕ್ಷಿತ ಫಲಿತಾಂಶದಿಂದ ಒಂದಷ್ಟು ಕಾರ್ಯಕರ್ತರನ್ನು ಮತ್ತೊಮ್ಮೆ ಗಟ್ಟಿಗೊಳಿಸಬೇಕಿದೆ.





































 
 

ಇನ್ನೂ, ಚುನಾವಣೆಯಲ್ಲಿ ಯಾವುದೇ ಒಳ ಒಪ್ಪಂದ ಆಗಿಲ್ಲ ಎಂದಿರುವ ಅವರು, ಹೊಂದಾಣಿಕೆ ಮಾಡಿಕೊಂಡಿದ್ದರೆ ಕನಕಪುರದಲ್ಲಿ ಡಿಕೆಶಿ ವಿರುದ್ಧ ಅಶೋಕ್ ಹಾಗೂ ವರುಣದಲ್ಲಿ ಸಿದ್ದರಾಮಯ್ಯ ವಿರುದ್ಧ ಸೋಮಣ್ಣ ಸ್ಪರ್ಧಿಸುತ್ತಿರಲಿಲ್ಲ ಎಂದು ಹೇಳಿದ್ದಾರೆ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನ ಕೇಳುವುದರಲ್ಲಿ ತಪ್ಪೇನಿಲ್ಲ ಎಂದು ಹೇಳಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top