ರಾಷ್ಟ್ರದ ಶಕ್ತಿ ಕೇಂದ್ರವಾಗಿರುವ ಸಂಸತ್ ಭವನದೊಳಗೆ ನುಗ್ಗಿದ ದುಷ್ಕರ್ಮಿಗಳ ಗುರುತು ಪತ್ತೆಯಾಗಿದ್ದು, ಮೂವರ ಪೈಕಿ ಇಬ್ಬರನ್ನು ಮೈಸೂರು ಮೂಲದವರು ಎಂದು ಹೇಳಲಾಗಿದೆ.
ಒಟ್ಟು ಮೂವರು ನೂತನ ಸಂಸತ್ ಭವನದೊಳಗೆ ನುಗ್ಗಿದ್ದರು. ಅವರಲ್ಲಿ ಇಬ್ಬರು ಮೈಸೂರು ಮೂಲದ ಮನೋರಂಜನ್ ಹಾಗೂ ಸಾಗರ್ ಶರ್ಮಾ ಎಂದು ಗುರುತಿಸಲಾಗಿದೆ. ಮನೋರಂಜನ್ ಇಂಜಿನಿಯರ್ ಎಂದು ಹೇಳಲಾಗಿದೆ.
ಘಟನೆ ತಕ್ಷಣವೇ ದುಷ್ಕರ್ಮಿಗಳನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು, ದುಷ್ಕರ್ಮಿಗಳ ವಿಚಾರಣೆ ನಡೆಸುತ್ತಿದ್ದಾರೆ.
























