ಕ್ಷೇತ್ರ ಹುಡುಕಾಟ ದುರಂತ : ಸಿ.ಟಿ.ರವಿ ವ್ಯಂಗ್ಯ

ಕಾಂಗ್ರೆಸ್ಸನ್ನು ಜನರೇ ಗುಡಿಸಿ ಹಾಕುತ್ತಿದ್ದಾರೆ

ಬೆಂಗಳೂರು : ಸುಮಾರು 40 ವರ್ಷದ ಸುದೀರ್ಘ ರಾಜಕೀಯ ಜೀವನದಲ್ಲಿ ಕಡೆವರೆಗೂ ಕ್ಷೇತ್ರ ಹುಡುಕುತ್ತಿರುವುದು ದುರಂತ ಎಂದು ಸಿ.ಟಿ.ರವಿ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಕುಟುಕಿದ್ದಾರೆ. ಮೈಸೂರಿನಲ್ಲಿ ಗೆಲ್ಲುವ ವಿಶ್ವಾಸ ಸಿದ್ದರಾಮಯ್ಯ ಅವರಿಗಿಲ್ಲ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿನ ನಂತರ ಅವರಿಗೆ ಎಲ್ಲೂ ಗೆಲ್ಲುವ ವಿಶ್ವಾಸ ಇಲ್ಲ, ಬಾದಾಮಿಯಲ್ಲೂ ಎರಡನೇ ಬಾರಿ ಗೆಲ್ಲುತ್ತೇನೆಂಬ ವಿಶ್ವಾಸ ಇಲ್ಲ, ಹೀಗಾಗಿ ಕೋಲಾರಕ್ಕೆ ಹೋಗುತ್ತಿದ್ದಾರೆ. ಇದು ಪ್ರಜಾಪ್ರಭುತ್ವ, ಜನ ತೀರ್ಮಾನ ಮಾಡ್ತಾರೆ. ಜನರ ತೀರ್ಮಾನವನ್ನು ಹೇಳುವುದಕ್ಕೆ ಆಗುವುದಿಲ್ಲ ಎಂದರು.

ದೇಶದ ಜನ ಒಂದೊಂದೇ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಗುಡಿಸುತ್ತಿದ್ದಾರೆ. ಪಂಜಾಬ್‌ನಲ್ಲಿ ಅಧಿಕಾರದಲ್ಲಿದ್ದಾಗ ಜನರು ಗುಡಿಸಿದರು. ದಿಲ್ಲಿಯಲ್ಲಿ ಠೇವಣಿ ಇಲ್ಲದಂತೆ ಗುಡಿಸಿದ್ದಾರೆ, ಉತ್ತರ ಪ್ರದೇಶದಲ್ಲಿ 399 ಸ್ಥಾನಗಳಲ್ಲಿ ಕಾಂಗ್ರೆಸ್‌ ಸ್ಪರ್ಧಿಸಿತ್ತು.





























 
 

387 ಸ್ಥಾನಗಳಲ್ಲಿ ಠೇವಣಿ ಕಳೆದುಕೊಂಡರು. ಜನರೇ ಕಾಂಗ್ರೆಸ್‌ ಪಕ್ಷವನ್ನು ಗುಡಿಸುತ್ತಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಜನರೇ ಮಾಲೀಕರು, ಅವರೇ ತೀರ್ಮಾನ ಮಾಡುವುದು, ಅವರೇ ಗುಡಿಸುತ್ತಾರೆ ಎಂದು ಹೇಳಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top