ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ಆರ್. ಸಿ. ನಾರಾಯಣ ರೆಂಜ ನೇಮಕ

ಪುತ್ತೂರು: ಕರ್ನಾಟಕ ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ಆರ್. ಸಿ. ನಾರಾಯಣ ರೆಂಜ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯಾಧ್ಯಕ್ಷರಾದ ರಘು ಕೌಟಿಲ್ಯಾ ಘೋಷಿಸಿದ್ದಾರೆ.

36 ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತರಾಗಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷರಾಗಿ ದಕ್ಷಿಣ ಕನ್ನಡ ಜಿಲ್ಲೆ ರಾಜ್ಯದಲ್ಲಿ ನಂ. ವನ್ ಜಿಲ್ಲೆಯಾಗಿ ಸಂಘಟನೆಯಲ್ಲಿ ಮುಂಚೂಣಿಯಲ್ಲಿತ್ತು. ಬೂತ್ ನಿಂದ  ರಾಜ್ಯಮಟ್ಟದವರೆಗೆ ತನ್ನ ಸಂಘಟನೆ ಕಾರ್ಯಶೈಲಿಯಿಂದ ಬಿಜೆಪಿಗೆ ಬಲ ತುಂಬಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕನಾಗಿ, ಎ.ಬಿ.ವಿ.ಪಿ. ಯಲ್ಲಿ ತಾಲೂಕು ಅಧ್ಯಕ್ಷರಾಗಿ ನಂತರ ಬಿಜೆಪಿ ಮಂಡಲ ಉಪಾಧ್ಯಕ್ಷರಾಗಿ, ಮಾಧ್ಯಮವಕ್ತರಾಗಿ, ಬಿಜೆಪಿ ಯುವಮೋರ್ಚಾದ ಮಂಡಲ ಉಪಾಧ್ಯಕ್ಷರಾಗಿ, ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ಮಾಧ್ಯಮ ಪ್ರಮುಖರಾಗಿ, ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಣೆ ಮಾಡಿದ್ದಾರೆ. ಜೇಸಿಸ್ ಅಧ್ಯಕ್ಷರಾಗಿ, ರೋಟರಿಯಾಕ್ಟ್ ಪದಾಧಿಕಾರಿಯಾಗಿ ಅನೇಕ ಸಂಘ ಸಂಸ್ಥೆಗಳಲ್ಲಿ ಸಮಾಜ ಸೇವಕರಾಗಿ ಕೆಲಸ ನಿರ್ವಹಿಸಿದ್ದಾರೆ.

ಪುತ್ತೂರು ಬಿಲ್ಲವ ಸಂಘಟನೆಯಲ್ಲಿ ಪ್ರಮುಖ ಪಾತ್ರವಹಿಸಿರುವ ಅವರು ಗ್ರಾಮ ಸಂಚಲನ ಸಮಿತಿ ಸದಸ್ಯರಾಗಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿ, ಪುತ್ತೂರು ನಾರಾಯಣ ಗುರು ಮಂದಿರದ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದರು. ಕುಂಬ್ರ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಜಿಲ್ಲಾ ಮೂರ್ತೆದಾರರ ಮಹಾಮಂಡಳದ ನಿರ್ದೇಶಕರಾಗಿ ಸಹಕಾರಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಸಂಘಟನಾ ಕಾರ್ಯಕ್ಕೆ ರಾಜ್ಯಮಟ್ಟದ ಜವಾಬ್ದಾರಿ ಒಲಿದು ಬಂದಿದೆ.









https://screenapp.io/app/#/shared/8P4BcrrHNx























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top