ಜಮೀನಿನ ನಕ್ಷೆ ನೀಡಲು ಸರ್ವೆಯರ್‍ ನಿಂದ ಲಂಚ ಸ್ವೀಕಾರ : ಲೋಕಾಯುಕ್ತರ ಬಲೆಗೆ

ಮಂಗಳೂರು: ಲಂಚ ಸ್ವೀಕರಿಸುತ್ತಿರುವ ಸಂದರ್ಭ ಸರ್ವೆಯರ್ ಶೀತಲ್ ರಾಜ್ ಎಂಬವರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ.

ಜಮೀನಿನ ನಕ್ಷೆ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಂಧಿಸಲಾಗಿದೆ.

ನೀರುಮಾರ್ಗದ ಲಿಲ್ಲಿ ಪೀಟರ್ ವಾಸ್ ಇವರ ಪರವಾಗಿ ಸ್ಟೆಲ್ಲಾ ಜಾನೆಟ್ ವಾಸ್ ಅವರ ಹೆಸರಿಗೆ ತತ್ಕಾಲ್ ಪೋಡಿ ಮಾಡಿಕೊಡುವ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯ ಪಹಣಿ ವಿಭಾಗದಲ್ಲಿ ಆನ್‌ಲೈನ್ ಮುಖಾಂತರ ಜಮೀನಿನ ತತ್ಕಾಲ್ ಪೋಡಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಸಮಯ ಸರಕಾರಿ ಶುಲ್ಕ 1500 ರೂ. ಪಾವತಿಸಿ ರಶೀದಿ ಪಡೆದಿದ್ದರು.





























 
 

ಬಳಿಕ ಸರ್ವೆ ಇಲಾಖೆಯ ಸರ್ವೆಯರ್ ಶೀತಲ್‌ ರಾಜ್ ಎಸ್.ಜಿ. ಸರ್ವೆಗೆ ಬಂದಿದ್ದು, ಜಮೀನಿನ ಸರ್ವೆ ಕಾರ್ಯ ನಡೆಸಿ ಸ್ಥಳ ಮಹಜರು ಮಾಡಿದ್ದಾರೆ. ಈ ಸಂದರ್ಭ ಐದು ಸಾವಿರ ಬೇಡಿಕೆಯಿಟ್ಟಿದ್ದಾರೆ. ದೂರುದಾರರು ಸ್ವಲ್ಪ ಕಡಿಮೆ ಮಾಡುವಂತೆ ಚರ್ಚೆ ಮಾಡಿದ್ದು, ಆಗ 4 ಸಾವಿರ ರೂ. ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ದೂರುದಾರರಿಂದ ಲಂಚದ ಹಣ ಸ್ವೀಕರಿಸುತ್ತಿರುವಾಗಲೇ ಲೋಕಾಯುಕ್ತ ಎಸ್ಪಿ ಸಿ.ಎ.ಸೈಮನ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಚಲುವರಾಜು ಬಿ., ಡಾ. ಗಾನ ಪಿ. ಕುಮಾರ್ ಹಾಗೂ ಇನ್‌ಸ್ಪೆಕ್ಟರ್ ಅಮಾನುಲ್ಲಾ, ಸುರೇಶ್ ಕುಮಾರ್ ಪಿ. ಸಿಬ್ಬಂದಿ ಜತೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ  ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top