ಪುತ್ತೂರು ಬಿಜೆಪಿ ಕಾರ್ಯಕರ್ತ ಜಯಾನಂದ ಬಂಗೇರ ಮೇಲಿನ ಕಾಂಗ್ರೆಸ್ ಗೂಂಡಾಗಿರಿ ಖಂಡನೀಯ : ಕ್ಯಾ.ಬ್ರಿಜೇಶ್ ಚೌಟ

ಪುತ್ತೂರು: ಪುತ್ತೂರಿನ ಶಾಸಕರ 1400 ಕೋಟಿಯ ಅನುದಾನದ ಬಗ್ಗೆ ಮಾಹಿತಿ ಕೇಳಿದ ಬಿಜೆಪಿ ಕಾರ್ಯಕರ್ತ ಜಯಾನಂದ ಬಂಗೇರರ ಮನೆಗೆ ನುಗ್ಗಿ ದಾಂದಲೆ ನಡೆಸಿರುವ ಘಟನೆಯನ್ನು ತೀವ್ರವಾಗಿ ಖಂಡನೀಯ ಎಂದು ದ.ಕ.ಜಿಲ್ಲಾ ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಹೇಳಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ತಾನು 1400 ಕೋಟಿಯ ಅನುದಾನ ತಂದಿದ್ದೇನೆ ಎಂದು ಹೇಳುವ ಶಾಸಕರಿಗೆ ಆ ಬಗ್ಗೆ ಮಾಹಿತಿ ನೀಡಲು ಹಿಂಜರಿಕೆ ಏಕೆ.  ಅನುದಾನದ ಬಗ್ಗೆ ಮಾಹಿತಿ ನೀಡಲು ಪುತ್ತೂರು ಶಾಸಕರು ವಿಫಲರಾಗಿದ್ದು, ಹತಾಶರಾಗಿರುವ ಶಾಸಕರು ತನ್ನ ಗೂಂಡ ಕಾರ್ಯಕರ್ತರ ಮೂಲಕ ಬಾಯಿ ಮುಚ್ಚಿಸುವ ಕೆಲಸವನ್ನು ಮಾಡುತ್ತಿದ್ದು, ಇಂತಹ ಗೊಡ್ಡು ಬೆದರಿಕೆಗಳಿಗೆ ಬಿಜೆಪಿ ಕಾರ್ಯಕರ್ತರು ಹೆದರುವುದಿಲ್ಲ.

ಕಾಂಗ್ರೆಸ್ ಸರಕಾರ ಬಂದ ನಂತರ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದ್ದು, ಈ ರೀತಿಯ ಘಟನೆಗಳಿಗೆ ಅವಕಾಶಗಳನ್ನು ನೀಡಬಾರದು, ಸದರಿ ಪ್ರಕರಣವನ್ನು ಪೋಲಿಸರು ಪ್ರಭಾವಗಳಿಗೆ ಮಣಿಯದೇ ಗಂಭೀರವಾಗಿ ಪರಿಗಣಿಸಿ ಕಾಂಗ್ರೆಸ್ ಗೂಂಡಾಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತೇನೆ ಎಂದು ತಿಳಿಸಿದ್ದಾರೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top