ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ | ಒಂಭತ್ತು ಮಂದಿ ಪೊಲೀಸರ ವಶಕ್ಕೆ | ಜಾಮೀನಿನ  ಮೇಲೆ ಬಿಡುಗಡೆ

ಪುತ್ತೂರು: ಸಾಮಾಜಿಕ ಜಾಲತಾಣ ವಿಚಾರಕ್ಕೆ ಸಂಬಂಧಿಸಿ ಅಪಪ್ರಚಾರ ನಡೆಸಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರ ಮನೆ ವಠಾರಕ್ಕೆ ಅಕ್ರಮ ಪ್ರವೇಶ ಮಾಡಿ ಜೀವ ಬೆದರಿಕೆ ಒಡ್ಡಿದ ಘಟನೆ ಸಂಬಂಧಿಸಿದಂತೆ ಒಂಭತ್ತು ಮಂದಿಯನ್ನು ಪುತ್ತೂರು ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತರನ್ನು ಕಡಬ ತಾಲೂಕಿನ ಪಾತಾಜೆ ನಿವಾಸಿ ಪ್ರಜ್ವಲ್ ರೈ, ವಿಟ್ಲ ಕಂಬಳಬೆಟ್ಟು ನಿವಾಸಿ ಸುಶಾಂತ್ ಶೆಟ್ಟಿ, ಪುತ್ತೂರಿನ ಆರ್ಯಾಪು ನಿವಾಸಿ ಸನತ್ ರೈ, ಬಲ್ನಾಡು ನಿವಾಸಿ ರೋಹಿತ್ ನಾಯ್ಕ್, ಸಾಮೆತಡ್ಕ ನಿವಾಸಿ ಅಖಿಲ್, ಆರ್ಯಾಪು ನಿವಾಸಿ ಕೀರ್ತನ್ ರೈ, ಬನ್ನೂರು‌ ನಿವಾಸಿ ಸರ್ವೇಶ್ ರಾಜ್ ಅರಸ್, ವಿಟ್ಲ ಕಂಬಳಬೆಟ್ಟು ನಿವಾಸಿ ಸುಮಿತ್ ಶೆಟ್ಟಿ ಎಂದು ಗುರುತಿಸಲಾಗಿದೆ.

ಇದೀಗ ಬಂಧಿತ ಆರೋಪಿಗಳನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ.





























 
 

ಬಿಜೆಪಿ ಸಾಮಾಜಿಕ ಜಾಲತಾಣ ಪ್ರಮುಖ್ ಜಯಾನಂದ ಕೆ. ಅವರ ಮನೆಗೆ ಬ್ಯಾನರ್, ಬ್ಯಾಂಡ್ ನೊಂದಿಗೆ ತೆರಳಿ ಎಚ್ಚರಿಕೆ ನೀಡಲಾಗಿತ್ತು.

ಪುತ್ತೂರು ನಗರ ಠಾಣಾ ಇನ್ಸ್ ಪೆಕ್ಟರ್ ಸತೀಶ್ ಜಿ.ಜೆ. ಹಾಗೂ ಎಸ್ ಐ ನಂದಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top