ಸಾಮಾಜಿಕ ಜಾಲತಾಣದ ವಿಚಾರದಲ್ಲಿ ಜೀವ ಬೆದರಿಕೆ|ಆರೋಪಿಗಳ ಬಿಡುಗಡೆ ಸರಿಯಲ್ಲ: ಸಂಜೀವ ಮಠಂದೂರು

ಪುತ್ತೂರು: ಶಾಸಕರ ಬೆಂಬಲಿಗರು ಅಕ್ರಮವಾಗಿ ಮನೆ ಅಂಗಳಕ್ಕೆ ಪ್ರವೇಶಿಸಿ ಬಿಜೆಪಿ ಜಿಲ್ಲಾ ಸಾಮಾಜಿಕ ಜಾಲತಾಣ  ಪ್ರಕೋಷ್ಟ ಸದಸ್ಯರಾದ ಜಯಾನಂದ ಬಂಗೇರ ರವರ  ಮನೆ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿ ಜೀವ ಬೆದರಿಕೆ ಒಡ್ಡಿ ಪುಂಡಾಟಿಗೆ ಮೆರೆದ ಆರೊಪಿಗಳನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಿರುವುದು ಸರಿಯಲ್ಲ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ

 ಆರೋಪಿಗಳನ್ನು ದೇಶದಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿರುವಾಗಲೇ ಆರೋಪಿಗಳನ್ನು ಬಂಧನ ಮಾಡಿ ಯಾವ ಆದರದ ಮೇಲೆ ಬಿಡುಗಡೆಗೊಳಿಸಿದ್ದೀರಿ ಎಂದು ಪುತ್ತೂರು ನಗರ ಠಾಣಾ  ಇನ್ಸ್ಪೆಕ್ಟರ್ ಗೆ ಕರೆ ಮಾಡಿ ಮಾಜಿ ಶಾಸಕ  ಸಂಜೀವ ಮಠಂದೂರು ಪ್ರಶ್ನಿಸಿದ್ದರು ಹಾಗೂ ಜಯನಂದ  ಬಂಗೇರ ರವರ ಮನೆಯವರಿಗೆ ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಸ್ಥಳೀಯ  ನಗರ ಸಭಾ ಸದಸ್ಯರಾದ ಸುಂದರ ಪೂಜಾರಿ ಬಡಾವು, ಬಿಜೆಪಿ ಪುತ್ತೂರು ನಗರ ಮಂಡಲ ಕಾರ್ಯದರ್ಶಿ ಅಶೋಕ್ ಹಾರಡಿ, ಬಿಜೆಪಿ ಮಾಜಿ ಹಿಂದುಳಿದ ವರ್ಗಗಳ ಸದಸ್ಯ ಪುರುಷೋತ್ತಮ ಬಂಗೇರ, ಮತ್ತು ಕಾರ್ಯಕರ್ತರು ಜೊತೆಗಿದ್ದರು.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top