ಡಾ. ಅನುರಾಧಾ ಕುರುಂಜಿಯವರಿಗೆ  ಶಿವಶರಣೆ ನೀಲಾಂಬಿಕೆ  ಪ್ರಶಸ್ತಿ, ರಾಜ್ಯ ಮಟ್ಟದ ಕವಿಗೋಷ್ಠಿಗೆ ಆಯ್ಕೆ | ರಾಜ್ಯ ಮಟ್ಟದ  ಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನದಲ್ಲಿ ರಾಜ್ಯದ 25 ಮಹಿಳಾ ಸಾಧಕಿಯರಿಗೆ ಪುರಸ್ಕಾರ

ಸುಳ್ಯ: ಉಪನ್ಯಾಸಕಿ, ವ್ಯಕ್ತಿತ್ವ ವಿಕಸನ ತರಬೇತುದಾರೆ ಡಾ. ಅನುರಾಧಾ ಕುರುಂಜಿಯವರು ಬೆಂಗಳೂರಿನ ವಿಶ್ವ ಕನ್ನಡ ಸಂಸ್ಥೆಯವರು ಕೊಡ ಮಾಡುವ  ಶಿವಶರಣೆ ನೀಲಾಂಬಿಕೆ  ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಶೈಕ್ಷಣಿಕ ಕಾರ್ಯ ಚಟುವಟಿಕೆಯ ಜೊತೆಗೆ ವ್ಯಕ್ತಿತ್ವ ವಿಕಸನ ತರಬೇತುದಾರರಾಗಿ ಬಿಡುವಿನ ವೇಳೆ ಸುಮಾರು 2100 ಕ್ಕೂ ಅಧಿಕ ತರಬೇತಿ ನೀಡುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಅವರ ಶೈಕ್ಷಣಿಕ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಮಾ.29 ರಂದು ಬೆಂಗಳೂರಿನ ಬಗಲಕುಂಟೆ ಮಹಾಲಕ್ಷ್ಮಿ ಕಲ್ಯಾಣ ಮಂಟಪದಲ್ಲಿ  ನಡೆಯುವ ವಿಶ್ವ ಕನ್ನಡ ರಾಜ್ಯ ಮಟ್ಟದ  ಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನದಲ್ಲಿ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಾ.. ಅನುರಾಧಾ ಕುರುಂಜಿಯವರು ಪ್ರಶಸ್ತಿ ಸ್ವೀಕರಿಸಲಿದ್ದು, ರಾಜ್ಯದ 25 ಮಹಿಳಾ ಸಾಧಕಿಯರು ಪುರಸ್ಕಾರ ಪಡೆಯಲಿದ್ದಾರೆ. ಇದೇ ದಿನ ನಡೆಯುವ ರಾಜ್ಯ ಮಟ್ಟದ ಮಹಿಳಾ ಕವಿಗೋಷ್ಠಿಗೂ ಡಾ. ಅನುರಾಧಾ ಕುರುಂಜಿಯನರು ಆಯ್ಕೆಯಾಗಿದ್ದು ತಮ್ಮ ಸ್ವರಚಿತ ಕವನವನ್ನು ವಾಚಿಸಲಿರುವರು.





























 
 

ಅನುರಾಧಾ ಕುರುಂಜಿಯವರು ಕುರುಂಜಿ ಪದ್ಮಯ್ಯ ಗೌಡ -ಸೀತಮ್ಮ ದಂಪತಿ ಪುತ್ರಿ, ಚಂದ್ರಶೇಖರ ಬಿಳಿನೆಲೆಯವರ ಪತ್ನಿ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top