30 ವರ್ಷಗಳ ರಾಜಕೀಯ ಜೀವನದಲ್ಲಿ ಹಲವು ಜವಾಬ್ದಾರಿಗಳ ಯೋಗ ಸಿಕ್ಕಿದೆ  | ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಭಾನುವಾರ ಭೇಟಿ ನೀಡಿದರು.

ಶ್ರೀ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಅವರು ಮಾಧ್ಯಮದವರ ಜೊತೆ ಮಾತನಾಡಿ, ಚುನಾವಣಾ ರಾಜಕೀಯ ಜೀವನದಿಂದ ದೂರ ಸರಿಸಯುವೆ. ಆದರೆ ರಾಜಕೀಯದಿಂದಲ್ಲ ಎಂದ ಅವರು, 30 ವರ್ಷಗಳ ರಾಜಕೀಯ ಜೀವನದಲ್ಲಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಹಲವು ಜವಬ್ದಾರಿಗಳನ್ನು ನಿರ್ವಹಿಸುವ ಯೋಗ ಸಿಕ್ಕಿದೆ.

ಮೊದಲಿಗೆ ನರೇಂದ್ರ ಮೋದಿಯವರನ್ನು ಪ್ರಧಾನಿ ಮಾಡುವುದಷ್ಟೇ ನಮ್ಮ ಗುರಿ. ಪರಿವಾರ ವಾದ, ಭ್ರಷ್ಟಾಚಾರದಿಂದ ಮುಕ್ತವಾಗಬೇಕು ಎನ್ನುವ ಕಲ್ಪನೆ ನರೇಂದ್ರ ಮೋದಿಯವರದ್ದು. ಆದರೆ ರಾಜ್ಯದ ಜವಾಬ್ದಾರಿ ಹೊತ್ತವರು ಅದೆಲ್ಲವನ್ನು ಹೊಂದಿದ್ದಾರೆ. ಹಾಗಾಗಿ ಮುಂದೆ ಇದನ್ನೆಲ್ಲಾ ಶುದ್ಧೀಕರಣ ಮಾಡುವ ಕೆಲಸವನ್ನು ನಾವೆಲ್ಲಾ ಮಾಡ್ತೇವೆ ಎಂದರು.





























 
 

ಈ ಸಂದರ್ಭದಲ್ಲಿ ಹಲವಾರು ಮಂದಿ ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top