ಶಾಂತಿಯುತ ಮತದಾನ ಹಿನ್ನಲೆ | ದ.ಕ.ಜಿಲ್ಲೆಯಿಂದ 13 ಮಂದಿ ಗಡಿಪಾರು, ನಾಲ್ವರ ಮೇಲೆ ಗೂಂಡಾ ಕಾಯ್ದೆ

ಮಂಗಳೂರು: ಲೋಕಸಭೆ ಚುನಾವಣೆಯನ್ನು ಶಾಂತಿಯುತವಾಗಿ ನಡೆಸುವ ಹಿನ್ನಲೆಯಲ್ಲಿ ಮಂಗಳೂರು ನಗರದಲ್ಲಿ ನಾಲ್ವರು ರೌಡಿಗಳ ವಿರುದ್ಧ ಗೂಂಡಾ ಕಾಯ್ದೆ ಹೇರಲಾಗಿದ್ದು, ಮತ್ತೆ 13 ಮಂದಿಯನ್ನು ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ.

ಉಳ್ಳಾಲ ಅಂಬ್ಲಮೊಗರು ನಿವಾಸಿ ಹೇಮಚಂದ್ರ ಅಲಿಯಾಸ್ ಪ್ರಜ್ವಲ್ ಪೂಜಾರಿ (29), ಉಳ್ಳಾಲ ಕೈರಂಗಳ ನಿವಾಸಿ ನವಾಜ್ ಅಲಿಯಾಸ್ (36), ಕುದ್ರೋಳಿ ನಿವಾಸಿ ಅನೀಶ್ ಅಶ್ರಫ್ (26) ಹಾಗೂ ಬೋಳೂರು ನಿವಾಸಿ ಚರಣ್ ಶೇಟ್ ಅಲಿಯಾಸ್ ಚರಣ್ ಪಾಲ್ (39) ಎಂಬವರ ವಿರುದ್ಧ ಗೂಂಡಾ ಕಾಯ್ದೆ ಹೇರಲಾಗಿದೆ. ಈ ನಾಲ್ವರು ವಿರುದ್ಧ ವಿವಿಧ ಠಾಣೆಗಳಲ್ಲಿ ಕೊಲೆಯತ್ನ, ಕಿಡ್ನಾಪ್ ಗಲಭೆ, ದರೋಡೆ ಮುಂತಾದ ಕೇಸುಗಳಿವೆ.

ಈ ಸಂದರ್ಭ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಮತ್ತೆ 13 ಮಂದಿ ಅಪರಾಧ ಹಿನ್ನೆಲೆಯುಳ್ಳವರನ್ನು ಜಿಲ್ಲೆಯಿಂದ ಗಡಿಪಾರು ಮಾಡಲು ಪೊಲೀಸ್ ಕಮಿಷನರ್ ಆದೇಶ ಮಾಡಿದ್ದಾರೆ. ವಾರದ ಹಿಂದೆ 48 ಮಂದಿಯ ವಿರುದ್ಧ ಗಡಿಪಾರು ಆದೇಶ ಮಾಡಲಾಗಿತ್ತು.





























 
 

ಬೋಳಾರ ನಿವಾಸಿ ಜ್ಞಾನೇಶ್ ನಾಯಕ್(25), ಕುದ್ರೋಳಿ ನಿವಾಸಿ ಫಹಾದ್(25), ಉಳ್ಳಾಲ ಮೊಗವೀರಪಟ್ನ ನಿವಾಸಿ ಧನುಷ್ (30), ಕಾವೂರು ಶಾಂತಿನಗರದ ಮೊಹಮ್ಮದ್ ಸಾಹೇಬ್(28), ಮೂಡುಶೆಡ್ಡೆ ದೀಪಕ್ ಪೂಜಾರಿ(38), ಕೃಷ್ಣಾಪುರದ ಶಾಹಿಲ್ ಇಸ್ಮಾಯಿಲ್(27), ಉಳ್ಳಾಲ ಬಸ್ತಿಪಡ್ಪು ನಿವಾಸಿ ಮಹಮ್ಮದ್ ಶಕೀರ್(30), ಉಳ್ಳಾಲ ಮೇಲಂಗಡಿಯ ಇಬ್ರಾಹಿಂ ಖಲೀಲ್ (22), ಕುದ್ರೋಳಿ ಧನುಷ್ (28), ಬಜಾಲಿನ ನೌಫಾಲ್ (35), ಮರೋಳಿಯ ಹವಿತ್ ಪೂಜಾರಿ(28), ಫರಂಗಿಪೇಟೆಯ ಕೌಶಿಕ್ ನಿಹಾಲ್ (24), ಬೆಳುವಾಯಿ ನಿವಾಸಿ ಸಂತೋಷ್ ಶೆಟ್ಟಿ (34) ವಿರುದ್ಧ ಗಡಿಪಾರು ಆದೇಶ ಮಾಡಲಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top