ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ | ಪ್ರಮುಖ ಆರೋಪಿಗಳಿಗೆ ಹಣ ಸಹಾಯ ಮಾಡಿದ ಸಹೋದರರು ಎನ್ ಐ ಎ ವಶಕ್ಕೆ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಹುಬ್ಬಳ್ಳಿಯಲ್ಲಿ ಇಬ್ಬರು ಸಹೋದರರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಹುಬ್ಬಳ್ಳಿಯ ಗೌಸಿಯಾ ಟೌನ್ ನಿವಾಸಿ ಸಾಫ್ಟ್ವೇರ್ ಇಂಜಿನಿಯರ್ ಶೋಯೆಬ್ ಮಿರ್ಜಾ ಹಾಗೂ ಆತನ ಸಹೋದರ ಅಜೀಬ್ ಸದ್ಯ ಎನ್ಐಎ ವಶದಲ್ಲಿದ್ದು, ಇವರಿಬ್ಬರೂ ವಿದೇಶಿ ಹ್ಯಾಂಡ್ಲರ್ಗಳ ಸೂಚನೆಯಂತೆ ರಾಮೇಶ್ವರಂ ಕೆಫೆ ಸ್ಫೋಟದ ಪ್ರಮುಖ ಆರೋಪಿಗಳಾದ ಅಬ್ದುಲ್ ಮತೀನ್ ತಾಹ ಹಾಗೂ ಮುಸಾವೀರ್ ಹುಸೇನ್ ಗೆ ಹಣ ಸಹಾಯ ಮಾಡಿದ್ದಾರೆ ಎಂಬ ಮಾಹಿತಿ ಎನ್ಐಎ ಅಧಿಕಾರಿಗಳಿಗೆ ದೊರೆತಿದೆ.

ಮಂಗಳವಾರ ಬೆಂಗಳೂರು ಸೇರಿದಂತೆ 11 ಪ್ರದೇಶಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿತ್ತು. ಈ ಕಾರ್ಯಾಚರಣೆಯಲ್ಲಿ ಎನ್ಐಎ ಅಧಿಕಾರಿಗಳು ಹುಬ್ಬಳ್ಳಿಯ ಸಹೋದರಿಬ್ಬರನ್ನು ವಶಕ್ಕೆ ಪಡೆದುಕೊಂಡು, ತಡರಾತ್ರಿವರೆಗೆ ವಿಚಾರಣೆ ನಡೆಸಿದ್ದರು. ಶೋಯೆಬ್ ಪತ್ನಿಯ ನಿವಾಸ ಬೆಳಗಾವಿಯಲ್ಲೂ ಅಧಿಕಾರಿಗಳು ವಿಚಾರಣೆ ಮಾಡಿದ್ದಾರೆ.





























 
 

ಶೋಯೆಬ್ ಮಿರ್ಜಾ ಹಾಗೂ ಆತನ ಸಹೋದರ ಅಜೀಬ್ ಹಣ ಸಹಾಯ ಮಾಡಿದ ಬಗ್ಗೆ ಕೆಲ ಡಿಜಿಟಲ್ ಸಾಕ್ಷ್ಯಗಳು ಎನ್ಐಎಗೆ ದೊರೆತಿವೆ. ಹಣ ಸಹಾಯದ ಬಗ್ಗೆ ಸಹೋದರರು ವಿದೇಶಿ ಹ್ಯಾಂಡ್ಲರ್ನ ಜೊತೆ ಕೋಡ್ ವರ್ಡ್ ನಲ್ಲಿ ಚಾಟಿಂಗ್ ಮಾಡಿದ್ದಾರೆ. ರಾಮೇಶ್ವರಂ ಕೆಫೆ ಸ್ಪೋಟ ಬಳಿಕ ಆರೋಪಿ ಮುಸಾವೀರ್ ಹುಬ್ಬಳ್ಳಿಗೆ ಭೇಟಿ ನೀಡಿ, ಇಲ್ಲಿ ಹಣ ಪಡೆದು ಪಶ್ಚಿಮ ಬಂಗಾಳಕ್ಕೆ ತೆರಳಿರುವ ಅನುಮಾನ ಇದೆ. ಹೀಗಾಗಿ ಸಹೋದರರಿಬ್ಬರನ್ನು ಹುಬ್ಬಳ್ಳಿ ಇಂದಿರಾ ನಗರದಲ್ಲಿರುವ ಕಚೇರಿಯಲ್ಲಿ ಎನ್ಐಎ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top