ಕಾಂಚನ ಈಶ್ವರ ಭಟ್ ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಪುತ್ತೂರು: ಸುದಾನ ಸಂಗೀತ ಕಲಾ ಶಾಲಾ ನಿರ್ದೇಶಕ ವಿದ್ವಾನ್ ಕಾಂಚನ ಈಶ್ವರ ಭಟ್ ಅವರ ಪಡೀಲು ವಿಜಯನಗರ ಬಡವಾಣೆಯಲ್ಲಿರುವ ಮನೆಗೆ ಕಳ್ಳರು ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಕುರಿತು ಇಂದು ಬೆಳಕಿಗೆ ಬಂದಿದೆ.

ವಿದ್ವಾನ್ ಕಾಂಚನ ಈಶ್ವರ ಭಟ್ ಅವರು ಸಂಗೀತ ಕಾರ್ಯಕ್ರಮಕ್ಕೆ ಮೈಸೂರಿಗೆ ಹೋಗಿದ್ದು, ಅವರ ಪುತ್ರ ಬೆಂಗಳೂರಿಗೆ ಹೋಗಿದ್ದರು. ಇಂದು ಮನೆಗೆ ಹಿಂದಿರುಗಿದಾಗ ಕಳವಾದ ಕುರಿತು ಬೆಳಕಿಗೆ ಬಂದಿದೆ.

ಅವರು ಮನೆಗೆ ಬಂದಾಗ ಮನೆಯ ಎದುರಿನ ಬಾಗಿಲ ಬೀಗ ಮುರಿದು ಬಿದಿತ್ತು. ಒಳಗೆ ನೋಡಿದಾಗ ಚಿನ್ನಾಭರಣ ಕಳವಾಗಿರುವುದು ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿ ಪುತ್ತೂರು ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಸತೀಶ್ ತೆರಳಿ ಮಾಹಿತಿ ಪಡೆದುಕೊಂಡಿದ್ದು, ಸ್ಥಳಕ್ಕೆ ಶ್ವಾನ ದಳ ಮತ್ತು ಬೆರಳಚ್ಚು ತಜ್ಞರು ಬಂದು ಪರಿಶೀಲನೆ ನಡೆಸಿದ್ದಾರೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top