ಪುತ್ತೂರು ತಾಲೂಕಿನ ಬೆಥನಿ ಸಂಸ್ಥೆಯ ಆಡಳಿತಕ್ಕೆ ಒಳಪಟ್ಟ ಶಾಲೆಗಳ ಶಿಕ್ಷಕ- ಶಿಕ್ಷಕಿಯರ ಪುನಶ್ಚೇತನ ಕಾರ್ಯಗಾರ

ಪುತ್ತೂರು:  ತಾಲೂಕಿನಲ್ಲಿ ಬೆಥನಿ ಸಂಸ್ಥೆಯ ಆಡಳಿತಕ್ಕೆ ಒಳಪಟ್ಟ ಶಾಲೆಗಳಾದ ಬೆಥನಿ ಪ್ರೌಢಶಾಲೆ, ಪಾಂಗ್ಲಾಯ್ ಬೆಥನಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಲಿಟ್ಲ್ ಫ್ಲವರ್ ಶಾಲೆಯ ಶಿಕ್ಷಕ ಶಿಕ್ಷಕಿಯರ ಪುನಶ್ಚೇತನ ಕಾರ್ಯಾಗಾರ ಶುಕ್ರವಾರ ಬೆಥನಿ ಶಾಲೆಯ ಸಭಾಂಗಣದಲ್ಲಿ, ನಡೆಯಿತು.

ಬೆಥನಿ ಶಾಲಾ ಸಂಚಾಲಕಿ ವಂ. ಭಗಿನಿ ಪ್ರಶಾಂತಿ ಬಿ.ಎಸ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಾಗಾರವನ್ನು ಕುಲಶೇಖರ ಜೀವಂಧಾರ ಸಮಾಜ ಸೇವಾ ಸಂಘದ ಕಾರ್ಯದರ್ಶಿ ವಂ. ಭಗಿನಿ ಅನ್ನಾ ಮರಿಯ, ಕುಲಶೇಖರ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ವೇದಿಕೆಯಲ್ಲಿ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ.ಎಸ್, ಪಾಂಗ್ಲಾಯ್ ಬೆಥನಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಭಗಿನಿ ಸೆಲಿನ್ ಪೇತ್ರ ಬಿ.ಎಸ್ ಹಾಗೂ ಬೆಥನಿ ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಭಗಿನಿ ಆಗ್ನೇಸ್ ಶಾಂತಿ ಬಿ.ಎಸ್. ಉಪಸ್ಥಿತರಿದ್ದರು.

ಬಳಿಕ ಸಂಪನ್ಮೂಲ ವ್ಯಕ್ತಿಗಳಿಂದ ಬೆಥನಿ ಸಂಸ್ಥೆಯ ಕೇಂದ್ರೀಯ ಮೌಲ್ಯಗಳು ಮತ್ತು ಬೆಥನಿ ಶಿಕ್ಷಣ ಸಂಸ್ಥೆಯ ಸುವರ್ಣ ಮಹೋತ್ಸವದ ಪ್ರಮುಖ ಆದ್ಯತೆಗಳನ್ನು ಶಾಲಾ ಪಠ್ಯ ವಿಷಯದಲ್ಲಿ ಉಲ್ಲೇಖಿಸಿ, ಮಕ್ಕಳಲ್ಲಿ ಮೌಲ್ಯವನ್ನು ಜಾಗೃತ ಗೊಳಿಸುವ ವಿಧಾನ ಮತ್ತು ಶಾಲೆಯಲ್ಲಿ ಕೈಗೊಳ್ಳಬೇಕಾದ ಕ್ರಿಯಾಯೋಜನೆಗಳ ಬಗ್ಗೆ ವಿಚಾರ ವಿಮರ್ಶೆ ನಡೆಸಿದರು. ಮಧ್ಯಾಹ್ನದ ನಂತರ ಗುಂಪು ಚರ್ಚೆ, ವಿಷಯ ಮಂಡನೆ ನಡೆಯಿತು. 5 ತಂಡಗಳ ಪ್ರತಿನಿಧಿಗಳಾಗಿ ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್, ನಳಿನಾಕ್ಷಿ, ಅನಿತಾ ರೋಡ್ರಿಗಸ್, ಶ್ವೇತಾ, ವೀಣಾ ಮಸ್ಕರೆನ್ಹಸ್, ಜೇನಿಫರ್ ಮೋರಾಸ್, ಸೌಮ್ಯ ವಿಷಯ ಮಂಡಿಸಿದರು. ಶಿಕ್ಷಕಿಯರಾದ ಕ್ಲೇರಾ ಪಾಯಸ್, ಮೈತ್ರಿ ಅನಿಸಿಕೆ ವ್ಯಕ್ತಪಡಿಸಿದರು.





























 
 

ಭಗಿನಿ ಫೆಲ್ಸಿ ವೇಗಸ್ ಪ್ರಾರ್ಥಿಸಿ, ಬೆಥನಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಅನಿತಾ ರೋಡ್ರಿಗಸ್ ಸ್ವಾಗತಿಸಿ, ಬೆಥನಿ ಪ್ರೌಢಶಾಲೆಯ ಶಿಕ್ಷಕಿ ಬೃಂದಾ ವಂದಿಸಿದರು. ಲಿಟ್ಲ್ ಫ್ಲವರ್ ಶಾಲಾ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್ ಪ್ರಸ್ತಾವನೆಗೈದು, ಕಾರ್ಯಕ್ರಮ ನಿರೂಪಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top