ಈಜಲು ತೆರಳಿದ ಮುಂಬೈ ಮೂಲದ ಇಬ್ಬರು ಬಾಲಕಿಯರು ಮೃತ್ಯು

ಚಿಕ್ಕಬಳ್ಳಾಪು: ಇಬ್ಬರು ಬಾಲಕಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮಂಚೇನಹಳ್ಳಿ ಬಳಿ ಇರುವ ದಂಡಿಗಾನಹಳ್ಳಿ ಡ್ಯಾಮ್‌ನಲ್ಲಿ ನಡೆದಿದೆ.

ಮಹಾರಾಷ್ಟ್ರದ ಮುಂಬೈ ಮೂಲದ ಆಲಿಯಾ ಪಾಟೀಲ್ (17) ಹಾಗೂ ಜೋಯ ಪಾಟೀಲ್(14) ಮೃತಪಟ್ಟವರು.

ಬೇಸಿಗೆಯ ರಜೆ ಹಿನ್ನೆಲೆಯಲ್ಲಿ ಮುಂಬೈ ಮೂಲದ ಬಾಲಕಿಯರು ಗೌರಿಬಿದನೂರು ನಗರದ ಸಂಬಂಧಿಕರ ಮನೆಗೆ ಆಗಮಿಸಿದ್ದರು. ಇನ್ನೆರಡು ದಿನಗಳ ನಂತರ ಮುಂಬೈಗೆ ವಾಪಸ್ ಹೊರಡಲಿದ್ದು, ದಂಡಿಗಾನಹಳ್ಳಿ ಜಲಾಶಯವನ್ನು ಕಣ್ಣುಂಬಿಕೊಳ್ಳಬೇಕು ಎಂದು ಜಲಾಶಯಕ್ಕೆ ಹೋದವರು ಜಲಾಶಯದ ಬಳಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.





























 
 

ಸ್ಥಳೀಯರು ಇಬ್ಬರ ಮೃತದೇಹವನ್ನು ನೀರಿನಿಂದ ಮೇಲಕ್ಕೆತ್ತಿದ್ದಾರೆ. ಮೃತರ ಸಂಬಂಧಿಕರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ಮಾಡಿಸದೆ ಮನೆಗೆ ತೆಗೆದುಕೊಂಡು ಹೋಗಿದ್ದರು. ಕೊನೆಗೆ ಪೊಲೀಸರು ಮನೆಗೆ ತೆರಳಿ ಸಂಬಂಧಿಕರ ಮನವೊಲಿಸಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಈ ಸಂಬಂಧ ಮಂಚೇನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top