ಫೆ.5 : ತುಳಸೀವನ ಶ್ರೀ ಸಿದ್ಧಿ ವಿನಾಯಕ ಭಜನಾ ಮಂದಿರದ ವಾರ್ಷಿಕೋತ್ಸವ

ಕಟೀಲು ಮೇಳದವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

ಬಂಟ್ವಾಳ : ಬಂಟ್ವಾಳ ತಾಲೂಕಿನ ಬೋಳಂತೂರು ತುಳಸೀವನ ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರದ 20 ನೇ ವರ್ಷದ ವಾರ್ಷಿಕೋತ್ಸವ ಹಾಗೂ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ಫೆ.5 ಆದಿತ್ಯವಾರ ನಡೆಯಲಿದೆ.

ಬೆಳಗ್ಗೆ 10  ಕ್ಕೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ 12.30 ಕ್ಕೆ ಮಹಾಮಂಗಳಾರತಿ, ಪ್ರಸಾದ ವಿತರಣೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 5.45 ರಿಂದ ಭಜನಾ ಮಂದಿರದ ವಠಾರದಲ್ಲಿ ಹಾಕಿರುವ ಭವ್ಯ ರಂಗ ಮಂಟಪದಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಲಿದೆ. ಈ ಪುಣ್ಯ ಕಥಾ ಭಾಗವನ್ನು ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು ಶ್ರೀ ದೇವಿಯ ಪ್ರಸಾದ ಸ್ವೀಕರಿಸಬೇಕೆಂದು ಭಜನಾ ಮಂದಿರದ ಪ್ರಕಟಣೆ ತಿಳಿಸಿದೆ. ಸಂಜೆ 5.45 ಕ್ಕೆ ಮೇಳದ ದೇವರ ಚೌಕಿ ಪೂಜೆ ಬಳಿಕ ರಾತ್ರಿ 8 ಕ್ಕೆ ಅನ್ನಸಂತರ್ಪಣೆ ಜರಗಲಿದೆ ಎಂದು ಭಜನಾ ಮಂದಿರದ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top