ಕರ್ನಾಟಕ ವಕೀಲರ ಮೇಲಿನ ಹಿಂಸಾಚಾರ ಕಾಯ್ದೆ ಅಧಿಕೃತ ಜಾರಿಗೆ | ವಕೀಲರ ಬಹು ದಿನಗಳ ಬೇಡಿಕೆ ನನಸು

ಕರ್ನಾಟಕ ವಕೀಲರ ಮೇಲಿನ ಹಿಂಸಾಚಾರ ನಿಷೇಧ ಕಾಯ್ದೆ ಜಾರಿಗೆ ಬಂದಿದ್ದು,  ರಾಜ್ಯ ಸರ್ಕಾರ ಈ ಬಗ್ಗೆ ಗಜೆಟ್ ನೋಟಿಫಿಕೇಶನ್ ಪ್ರಕಟಿಸಿದ್ದು, ಕಾಯ್ದೆ ಜೂನ್ 10, 2024 ರಿಂದ ಅಧಿಕೃತವಾಗಿ ಜಾರಿಗೆ ಬಂದಿದೆ. ಈ ಮೂಲಕ ವಕೀಲರ ಬಹುದಿನಗಳ ಬೇಡಿಕೆ ನನಸಾಗಿದೆ.

“ವಕೀಲರ ಮೇಲಿನ ಹಿಂಸಾಚಾರ ನಿಷೇಧ ಕಾಯ್ದೆ” 2023ರ ಡಿಸೆಂಬರ್ 11ರಂದು ರಾಜ್ಯದ ಕಾನೂನು ಸಚಿವ ಎಚ್.ಕೆ. ಪಾಟೀಲ್ ಅವರು ಈ ಮಸೂದೆಯನ್ನು ಮಂಡಿಸಿದ್ದರು. ಇದು ಅನುಮೋದನೆಗೊಂಡು ಮಾರ್ಚ್ 20 ರಂದು ರಾಜ್ಯಪಾಲರ ಅಂಕಿತಕ್ಕೂ ಒಳಗಾಯಿತು.

ಇನ್ನು ಮುಂದೆ ಕರ್ತವ್ಯ ನಿರತ ವಕೀಲರ ಮೇಲೆ ಹಲ್ಲೆ, ದೌರ್ಜನ್ಯ ನಡೆದರೆ, ಕೃತ್ಯವೆಸಗಿದ ವ್ಯಕ್ತಿಯು ಆರು ತಿಂಗಳಿನಿಂದ ಮೂರು ವರ್ಷದ ವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆಗೆ ಒಳಗಾಗುತ್ತಾರೆ ಹಾಗೂ ಒಂದು ಲಕ್ಷ ರೂ. ಜುಲ್ಮಾನೆ ವಿಧಿಸಬಹುದಾಗಿದೆ ಅಥವಾ ಎರಡನ್ನೂ ವಿಧಿಸಲು ಮಸೂದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.





























 
 

ಪೊಲೀಸರು ಬಂಧಿಸಿದಾಗ ಏನು ಮಾಡಬೇಕು?

ಸಂಜ್ಞೆಯ ಅಪರಾಧದ ಕುರಿತು ವಕೀಲರನ್ನು ಪೊಲೀಸರು ಬಂಧಿಸಿದಾಗ ಅಂತಹ ಬಂಧನದ ಬಗ್ಗೆ ಪೊಲೀಸರು ಆರೋಪಿ ವಕೀಲರು ಸದಸ್ಯನಾಗಿರುವ ವಕೀಲರ ಸಂಘದ ಅಧ್ಯಕ್ಷ ಅಥವಾ ಕಾರ್ಯದರ್ಶಿಗೆ ಮಾಹಿತಿ ನೀಡಬೇಕು.

ತಕ್ಷಣದಿಂದಲೇ ಜಾರಿ:

ದಂಡನೀಯವಾದ ಪ್ರತಿಯೊಂದು ಅಪರಾಧವನ್ನು ಪ್ರಥಮ ದರ್ಜೆ ನ್ಯಾಯಿಕ ಮ್ಯಾಜಿಸ್ಟ್ರೇಟ್ ನ್ಯಾಯಾಲಯಗಳಿಗೆ ಕಡಿಮೆ ಇಲ್ಲದ ನ್ಯಾಯಾಲಯದ ಮೂಲಕ ವಿಚಾರಣೆ ನಡೆಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top