ಪುತ್ತೂರು ಕಂಬಳದಲ್ಲಿ ಅಸಭ್ಯ ವರ್ತನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಶ್ರೀ ಮಹಾಲಿಂಗೇಶ್ವರ ಮೊರೆ ಹೋದ ಕಂಬಳ ಸಮಿತಿ

ಪುತ್ತೂರು : ಪುತ್ತೂರಿನಲ್ಲಿ ಜ.೨೮ ರಂದು ನಡೆದ ಕಂಬ ಕೂಟದಲ್ಲಿ ನಡೆದ ಅಸಭ್ಯ ವರ್ತನೆ ಪ್ರಕರಣಕ್ಕೆ ಸಂಬಂಧಿಸಿದ ಕಂಬಳ ಸಮಿತಿಯವರು ಶ್ರೀ ಮಹಾಲಿಂಗೇಶ್ವರ ದೇವರ ಮೊರೆ ಹೋಗಿದ್ದು, ದೇವರ ನಡೆಯಲ್ಲಿ ಬುಧವಾರ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಏಕಾದಶ ರುದ್ರ ಸೇವೆ ಸಂಕಲ್ಪ ಸಲ್ಲಿಸಿದರು.

ಬುಧವಾರ ಮಧ್ಯಾಹ್ನ ಮಹಾಪೂಜೆ ಮೊದಲು ಕಂಬಳ ಸಮಿತಿ ಗೌರವಾಧ್ಯಕ್ಷೆ, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ನೇತೃತ್ವದ ತಂಡ ನಡೆಯಲ್ಲಿ ನಿಂತು ಪ್ರಾರ್ಥನೆ ಸಲ್ಲಿಸಿತು. ಕಂಬಳ ಗದ್ದೆಯಲ್ಲಿ ನಟಿಯೊಬ್ಬಳ ಜತೆ ಯಾರೋ ವ್ಯಕ್ತಿ ಅಸಭ್ಯ ವರ್ತನೆ ಮಾಡಿದ್ದಾನೆ ಎನ್ನಲಾದ ಆರೋಪಕ್ಕೆ ಸಂಬಂಧಿಸಿ ಫೋಟೋ, ವೀಡಿಯೋ ವೈರಲ್ ಮಾಡಲಾಗುತ್ತಿದೆ. ಕಂಬಳ ಸಮಿತಿಯನ್ನು ತಪ್ಪಿತಸ್ಥ ಸ್ಥಾನದಲ್ಲಿ ನಿಲ್ಲಿಸುವ ಯತ್ನ ಮಾಡಲಾಗುತ್ತಿದೆ. ನಮಗೆ ಮಹಾಲಿಂಗೇಶ್ವರ ಸಾನಿಧ್ಯವೇ ನ್ಯಾಯಾಲಯ. ದೇವರು ನಮಗೆ ನ್ಯಾಯ ನೀಡಬೇಕು ಎಂದು ಪ್ರಾರ್ಥಿಸಿದರು.

ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಪ್ರಾರ್ಥನೆ ಮಾಡಿ, ಅಹಿತಕರ ಘಟನೆ ನಡೆದಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ. ಇದರ ಹಿಂದೆ ಯಾರ ಕುಮ್ಮಕ್ಕು ಇದೆ, ಯಾರು ಇದರ ಹಿಂದಿದ್ದಾರೆ ಎಂಬುದಕ್ಕೆ ದೇವರೇ ನಮಗೆ ನ್ಯಾಯ ಕೊಡಬೇಕು ಎಂದರು.
ಅರ್ಚಕ ವಸಂತ ಕೆದಿಲಾಯ ಪ್ರಾರ್ಥನೆ ಸಲ್ಲಿಸಿ, ಗೊತ್ತಿದ್ದೋ ಗೊತ್ತಿಲ್ಲದೆಯೋ ಅಹಿತಕರ ಘಟನೆ ನಡೆದಿದ್ದರೆ ಅದಕ್ಕೆ ಮಹಾಲಿಂಗೇಶ್ವರ ದೇವರು ನ್ಯಾಯ ನೀಡಲಿ, ಬುದ್ಧಿ ನೀಡಲಿ. ಭವಿಷ್ಯದಲ್ಲಿ ಪುತ್ತೂರು ಕಂಬಳ ಯಾವುದೇ ವಿಘ್ನಗಳಿಲ್ಲದೆ ಸುಸೂತ್ರವಾಗಿ ನಡೆಯಲಿ ಎಂದರು.





















































 
 

ಕಂಬಳ ಸಮಿತಿಯ ಪ್ರಮುಖರಾದ ದಿನೇಶ್ ಕುಲಾಲ್ ಪಿ.ವಿ., ಪಂಜಿಗುಡ್ಡೆ ಈಶ್ವರ ಭಟ್, ನಿರಂಜನ ರೈ ಮಠಂತಬೆಟ್ಟು, ಶಿವರಾಮ ಆಳ್ವಾ, ದುರ್ಗಾಪ್ರಸಾದ್ ರೈ ಕುಂಬ್ರ, ಶಶಿಕಿರಣ್ ರೈ, ನವೀನ್ ಚಂದ್ರ ನಾಯ್ಕ್, ಕಂಪ ಸುಧಾಕರ ನಾಯ್ಕ್, ಜಯಪ್ರಕಾಶ್ ಬದಿನಾರು, ಧೀರಜ್ ಗೌಡ ಕೊಡಿಪ್ಪಾಡಿ, ಯತೀಶ್ ಶೆಟ್ಟಿ ಕೋಡಿಂಬಾಡಿ, ಪ್ರೇಮಾನಂದ ನಾಯ್ಕ್, ವಿಕ್ರಂ ಶೆಟ್ಟಿ ಕೋಡಿಂಬಾಡಿ, ಗಣೇಶ್‌ರಾಜ್ ಬಿಳಿಯೂರು, ಭಾಗ್ಯೇಶ್ ರೈ, ಯೋಗೀಶ್ ಮಠಂತಬೆಟ್ಟು ಮತ್ತಿತರರು ಉಪಸ್ಥಿತರಿದ್ದರು.

ಅನ್ಯಧರ್ಮೀಯ ಅನ್ಯಾಯ ಮಾಡಿದ್ದಾನೆ ಎಂದೆಲ್ಲ ವೈರಲ್ ಮಾಡಲಾಗುತ್ತಿದೆ. ಮಹಿಳೆ ಮೇಲೆ ಯಾರೇ ದುಷ್ಕೃತ್ಯ ಎಸಗಿದ್ದರೂ ಅದು ತಪ್ಪೆ. ಆತ ಅನ್ಯಧರ್ಮೀಯನೇ ಆಗಿರಲಿ, ಸ್ವಧರ್ಮೀಯನೇ ಆಗಿರಲಿ. ತಪ್ಪು ಮಾಡಿದವ ಆಧರ್ಮೀಯನೇ ಹೊರತು ಧರ್ಮೀಯನಲ್ಲ. ಘಟನೆ ಬಗ್ಗೆ ಸಂತ್ರಸ್ತರೆನೆಸಿಕೊಂಡವರು ದೂರು ನೀಡಿದರೆ ಪೊಲೀಸ್ ಇಲಾಖೆ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಿ. ಇದನ್ನೇ ನಾನು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದರು.
ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಮಾತನಾಡಿ, ಕಳೆದ ಹಲವಾರು ವರ್ಷಗಳಿಂದ ನಡೆಯುತ್ತಿರುವ ಪುತ್ತೂರು ಕಂಬಳದ ಹೆಸರು ಹಾಳು ಮಾಡಲು, ನಮ್ಮನ್ನು ತೇಜೋವಧೆ ಮಾಡಲು ಅಪಪ್ರಚಾರ ಮಾಡಲಾಗುತ್ತಿದೆ. ಮಹಾಲಿಂಗೇಶ್ವರನ ಮಣ್ಣಿನಲ್ಲಿ ನಡೆದ ಘಟನೆ. ದೇವರೇ ನೋಡಿಕೊಳ್ಳಲಿ ಎಂದು ನಾವು ಪ್ರಾರ್ಥಿಸಿದ್ದೇವೆ ಎಂದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top