ಸಮುದ್ರ ಪಾಲಾದ ಯುವಕ : ಮೂರು ದಿನ ಕಳೆದರೂ ಪತ್ತೆಯಾಗದ ಸುಳಿವು

ಉಡುಪಿ : ಕುಂದಾಪುರ ತಾಲೂಕಿನ ಬೀಜಾಡಿ ಬಳಿ ಸಮುದ್ರದಲೆಯ ಅಬ್ಬರಕ್ಕೆ ಕೊಚ್ಚಿಹೋಗಿ ನಾಪತ್ತೆಯಾದ ಯುವಕನಿಗಾಗಿ ಮೂರು ದಿನಗಳಿಂದ  ಶೋಧ ಕಾರ್ಯ ಮುಂದುವರಿದಿದ್ದು, ಈವರೆಗೂ ಯಾವುದೇ ಸುಳಿವು ಪತ್ತೆಯಾಗಿಲ್ಲ.

ತುಮಕೂರು ಜಿಲ್ಲೆಯ ತಿಪಟೂರು ಮೂಲದ ಯೋಗೀಶ್ (22) ಎಂಬಾತ ಸಮುದ್ರದಲ್ಲಿ ಆಟವಾಡುತ್ತಿದ್ದಾಗ ನೀರು ಪಾಲಾಗಿದ್ದನು.

ಮಳೆಗಾಲದ ಸಮುದ್ರದ ಅಬ್ಬರದ ಕುರಿತು ಮಾಹಿತಿ ಇಲ್ಲದೆ ನೀರಿಗೆ ಇಳಿದಿದ್ದ ಆತ, ಸಮುದ್ರದಲ್ಲಿ ಗಾಳಿಯ ಒತ್ತಡ ಮತ್ತು ನೀರಿನ ರಭಸಕ್ಕೆ ಕೊಚ್ಚಿಹೋಗಿದ್ದನು. ಗಂಗೊಳ್ಳಿಯ ಮುಳುಗು ತಜ್ಞ ದಿನೇಶ್ ಖಾರ್ವಿ ನೇತೃತ್ವದಲ್ಲಿ ಸ್ಥಳೀಯರ ತಂಡ ಹುಡುಕಾಟ ನಡೆಸುತ್ತಿದೆ. ಸಮುದ್ರದ ಒತ್ತಡಕ್ಕೆ ದೇಹವು ಬೈಂದೂರು ಅಥವಾ ಭಟ್ಕಳದತ್ತ ತೇಲಿ ಹೋಗಿರುವ ಸಾಧ್ಯತೆ ಎನ್ನಲಾಗಿದೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top