ಬೈಕ್ – ಖಾಸಗಿ ಬಸ್ ಅಪಘಾತ | ಬೈಕ್ ಸವಾರ ಸಾವು

ನಡ: ಲಾಯಿಲ ಪುತ್ರಬೈಲು ನಲ್ಲಿ ಬೈಕ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ತೀವ್ರ ಗಾಯಗೊಂಡು ಬೈಕ್ ಸವಾರ ಸಾವನ್ನಪ್ಪಿದ್ದ ಘಟನೆ ಜೂ.28 ರಂದು ಬೆಳಿಗ್ಗೆ ನಡೆದಿದೆ.

ಬೈಕ್ ಸವಾರ ಬಳಂಜ ನಿವಾಸಿಯಾಗಿದ್ದು ನಡ ಗ್ರಾಮಕರಣಿಕರ ಕಚೇರಿ ಸಹಾಯಕ ಅವಿವಾಹಿತ ಜಯರಾಜ್(45) ಎಂದು ತಿಳಿದುಬಂದಿದೆ.

ಬೈಕ್ ಸವಾರ ಜಯರಾಜ್ ರವರು ಬೆಳ್ತಂಗಡಿ ಕಡೆಯಿಂದ ನಡ ಕಚೇರಿಗೆ ತೆರಳುತ್ತಿದ್ದು ಬಸ್ಸು ಕಿಲ್ಲೂರಿನಿಂದ ಬೆಳ್ತಂಗಡಿಗೆ ಬರುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಜಯರಾಜ್ ರವರಿಗೆ ತೀವ್ರ ಗಾಯಗೊಂಡು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top