ಹೊಳೆಗೆ ಹಾರಿ ನಾಪತ್ತೆಯಾಗಿದ್ದ ಯುವಕ ಸನ್ಮಿತ್ ಶವ ಪತ್ತೆ

ಪುತ್ತೂರು: ಹರಿಯುತ್ತಿರುವ ಸರ್ವೆ ಸಮೀಪದ ಗೌರಿ ಹೊಳೆಯಲ್ಲಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಭಾನುವಾರ ಪತ್ತೆಯಾಗಿದೆ.  

ಕುದ್ಮಾರು ಗ್ರಾಮದ ತೆಕ್ಕಿತ್ತಡಿ ನಿವಾಸಿ ಚಂದ್ರ ಗೌಡ ಎಂಬವರ ಪುತ್ರ, ಮುಕ್ರಂಪಾಡಿಯ ಇಂಡಸ್ಟ್ರಿಯೊಂದರಲ್ಲಿ ಉದ್ಯೋಗಿಯಾಗಿರುವ ಸನ್ಮಿತ್ (21) ಎಂಬಾತ ಶುಕ್ರವಾರ ರಾತ್ರಿ ಹೊಳೆಗೆ ಹಾರಿರುವ ಶಂಕೆ ವ್ಯಕ್ತವಾಗಿತ್ತು. ಈ ಸಂದರ್ಭದಲ್ಲಿ ಹೊಳೆ ಸಮೀಪ ಆತನ ಬೈಕ್, ಚಪ್ಪಲಿ, ಪರ್ಸ್, ಮೊಬೈಲ್ ಪತ್ತೆಯಾಗಿತ್ತು.

ಇದೀಗ ಪೊಲೀಸರು, ಅಗ್ಮಿಶಾಮಕ ದಳ ಹಾಗೂ ಸ್ಥಳೀಯರ ಕಾರ್ಯಾಚರಣೆಯಿಂದ ಮೃತದೇಹ ಪತ್ತೆಯಾಗಿದೆ.







https://screenapp.io/app/#/shared/8P4BcrrHNx























 
 

ಸನ್ಮಿತ್ ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕೆ ವ್ಯಕ್ತವಾಗಿದೆ. ಎಂದಿನಂತೆ ಶುಕ್ರವಾರ ಕೆಲಸಕ್ಕೆ ಹಾಜರಾಗಿದ್ದ, ರಾತ್ರಿ ಮನೆಗೆ ಬರುವಾಗ ತಡವಾಗಬಹುದು ಎಂದು ಮನೆಯವರಿಗೆ ತಿಳಿಸಿದ್ದ ಎನ್ನಲಾಗಿದೆ. ರಾತ್ರಿ ಸುಮಾರು 11 ಗಂಟೆಯಾದರೂ ಮನೆಗೆ ಬಾರದಿದ್ದಾಗ, ಆತನ ಮೊಬೈಲ್‍ಗೆ ಕರೆ ಮಾಡಿದರೂ ಸ್ವೀಕರಿಸುತ್ತಿರಲಿಲ್ಲ. ಬಳಿಕ ರಾತ್ರಿ ಒಂದು ಗಂಟೆ ಸುಮಾರಿಗೆ ಆತನನ್ನು ಮನೆಯವರು ಹುಡುಕಿಕೊಂಡು ಬಂದಿದ್ದಾರೆ. ಈ ವೇಳೆ ಸರ್ವೆ ಹೊಳೆ ಬಳಿ ಮಗನ ಸ್ಕೂಟರ್‍ಕಂಡು ಬಂದು ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಬಳಿಕ ಶೋಧ ಕಾರ್ಯ ಆರಂಭಿಸಿದ್ದರು ಎನ್ನಲಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top