ಅಂಬಿಕಾ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಿದಾಯಕೂಟ

ಪುತ್ತೂರು : ಕುಟುಂಬ ವ್ಯವಸ್ಥೆ ಭಾರತದ ಶಕ್ತಿ. ಕುಟುಂಬದಿಂದ ದೇಶ ಕಟ್ಟುವ ಕೆಲಸ ಪ್ರಾರಂಭವಾಗುವುದು. ಜನನಿ ಮತ್ತು ಜನ್ಮ ಭೂಮಿ ಸ್ವರ್ಗಕ್ಕಿಂತಲೂ ಮಿಗಿಲಾದುದು. ದೇಶಕ್ಕಾಗಿ ಅಳಿಲ ಸೇವೆ ಎಲ್ಲರೂ ಮಾಡಬೇಕು. ಚಿಕಾಗೋದಲ್ಲಿ ಸ್ವಾಮಿ ವಿವೇಕಾನಂದರ ಕೆಲ ನಿಮಿಷಗಳ ಭಾಷಣ ಅವರನ್ನು ಜಗದ್ವಂದ್ಯರನ್ನಾಗಿ ಮಾಡಿತು. ಗುರಿ, ಶಿಸ್ತು, ಪ್ರಯತ್ನದಿಂದ ಮುಂದೆ ಬನ್ನಿ. ನಿಮ್ಮ ಬಗ್ಗೆ ನಿಮಗೆ ನಂಬಿಕೆ ಇರಲಿ ಎಂದು  ಖ್ಯಾತ ವಾಗ್ಮಿ ರಂಜನ್ ಬೆಳ್ಳರ್ಪಾಡಿ ಹೇಳಿದರು.

ಅವರು ಪುತ್ತೂರಿನ ನೆಲ್ಲಿಕಟ್ಟೆಯಲ್ಲಿರುವ ಅಂಬಿಕಾ ಪದವಿ ಪೂರ್ವ ಕಾಲೇಜಿನಲ್ಲಿ  ದ್ವಿತೀಯ ಪಿ.ಯು. ವಿದ್ಯಾರ್ಥಿಗಳ ವಿದಾಯ ಕೂಟದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.





























ನಟೋಜ ಫೌಂಡೇಶನ್ ಟ್ರಸ್ಟ್ ನ ಕೋಶಾಧಿಕಾರಿ ರಾಜಶ್ರೀ ನಟ್ಟೋಜ ಮಾತನಾಡಿ,  ಧರ್ಮವನ್ನು ಪಾಲಿಸಿ ಧರ್ಮದಿಂದ ಅರ್ಥ, ಕಾಮ, ಮೋಕ್ಷ – ಪಡೆಯಲು ಪ್ರಯತ್ನಿಸಬೇಕು. ವಿದ್ಯಾರ್ಥಿಗಳೆಲ್ಲಾ ಉತ್ತಮ ಪ್ರಯತ್ನದೊಂದಿಗೆ ದ್ವಿತೀಯ ಪಿ.ಯು.ಸಿಯ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಸನ್ಮಾನಕ್ಕೆ ಪಾತ್ರರಾಗಿ ಎಂದು ಶುಭ ಹಾರೈಸಿದರು.

 
 

ಸಂಸ್ಥೆಯ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ಅಧ್ಯಕ್ಷತೆ ವಹಿಸಿ,  ಅಂಬಿಕಾ ಮಹಾವಿದ್ಯಾಲಯದಲ್ಲಿ ತತ್ವ ಶಾಸ್ತ್ರ ಮತ್ತೆ ಪುನರುಜ್ಜೀವನ ಪಡೆಯುತ್ತಿದೆ. ಫಿಲೋಸಫಿ ಕಲಿಯಿರಿ. ದೇಶಕ್ಕಾಗಿ ಬಾಳಿ. ದೇಶ ಕಟ್ಟುವ ವೀರರಾಗಿ. ಸಮಾಜದ ಋಣ ನಮ್ಮೆಲ್ಲರಲ್ಲೂ ಇದೆ. ಏನಾದ್ರೂ ಸಮಾಜಕ್ಕಾಗಿ ನೀಡುವಂತವರಾಗಿ , ಮನುಷ್ಯರಾಗಿ, ದೇಶ ಭಕ್ತರಾಗಿ ಬಾಳಿ ಎಂದರು.

ಆಡಳಿತ ಮಂಡಳಿ ಸದಸ್ಯ ಸುರೇಶ ಶೆಟ್ಟಿಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಕಿಶೋರ್ ಗೌಡ, ಅಪೂರ್ವ.ಡಿ, ಗ್ರೀಷ್ಮ. ಕೆ, ಯಶು.ಜಿ, ಸಮೃದ್ಧ್, ಹಿಷಾ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.   ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಆರತಿ ಬೆಳಗಿ, ತಿಲಕವಿರಿಸಿ, ಸ್ಮರಣಿಕೆ ನೀಡಿ ಹರಸಿದರು. ವಿದ್ಯಾರ್ಥಿನಿ ಸುಧಾ ಕೋಟೆ ಪ್ರಾರ್ಥಿಸಿದರು. ಅಂಬಿಕಾ ಪ.ಪೂ. ವಿದ್ಯಾಲಯ ಬಪ್ಪಳಿಗೆಯ ಪ್ರಾಂಶುಪಾಲೆ ಸುಚಿತ್ರಾ ಪ್ರಭು  ಸ್ವಾಗತಿಸಿದರು. ಅಂಬಿಕಾ ಪ.ಪೂ.ವಿದ್ಯಾಲಯ ನೆಲ್ಲಿಕಟ್ಟೆಯ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ವಂದಿಸಿದರು. ಉಪನ್ಯಾಸಕಿ ಗೀತಾ.ಸಿ.ಕೆ ಕಾರ್ಯಕ್ರಮ ನಿರೂಪಿಸಿದರು.  .

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top