ಡಿವೈಎಸ್‍ ಪಿ ಕಚೇರಿ ಮೇಲೆ ಬಿದ್ದ ಮರ | ಅಪಾರ ನಷ್ಟ

ಬಂಟ್ವಾಳ : ತಾಲೂಕಿನಲ್ಲಿ ನಿನ್ನೆ ತಡರಾತ್ರಿ ಬೀಸಿದ ಗಾಳಿ ಮಳೆಯ ಪರಿಣಾಮವಾಗಿ ಅನೇಕ ಕಡೆಗಳಲ್ಲಿ ಹಾನಿಯಾಗಿದ್ದು, ಪೊಲೀಸ್ ಉಪವಿಭಾಗದ ಕಚೇರಿಯ ಛಾವಣಿ ಮೇಲೆ ತೆಂಗಿನ ಮರ ಬಿದ್ದು ಅಪಾರನಷ್ಟವುಂಟಾದ ಘಟನೆ ನಡೆದಿದೆ.

ಡಿ.ವೈ.ಎಸ್.ಪಿ ವಿಜಯಪ್ರಸಾದ್‌ ಅವರು ಕುಳಿತುಕೊಳ್ಳುವ ಕೊಠಡಿ ಮೇಲೆ ಕಚೇರಿಯ ಅಂಗಳದಲ್ಲಿದ್ದ ಹಳೆಯ ತೆಂಗಿನ ಮರ ಬಿದ್ದು ಹಂಚು ಹುಡಿಯಾಗಿದೆ. ಕಚೇರಿಯ ಒಳಗೆ ಮರದಲ್ಲಿದ್ದ ಸೀಯಾಳ ಮತ್ತು ತೆಂಗಿನಕಾಯಿ ಬಿದ್ದಿವೆ.

ನಿನ್ನೆ ರಾತ್ರಿ ವೇಳೆ ಘಟನೆ ನಡೆದಿದ್ದು, ಅದೃಷ್ಟವಶಾತ್ ಡಿ.ವೈ.ಎಸ್.ಪಿ.ಯವರು ಕಚೇರಿಯೊಳಗೆ ಇಲ್ಲದೆ ಇದ್ದರಿಂದ ಅಪಾಯ ತಪ್ಪಿದೆ. ಅವರು ಕೆಲವೇ ಕ್ಷಣದ ಹಿಂದೆ ಕಚೇರಿಯಿಂದ ಹೊರಟು ಹೋಗಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ ಎಂದು ಹೇಳಲಾಗುತ್ತಿದೆ.

































 
 

ಡಿ.ವೈ.ಎಸ್.ಪಿ.ಕಚೇರಿಯ ದುರಸ್ಥಿ ಕಾರ್ಯ ನಡೆಯುತ್ತಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top