ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ | ಮಹೇಶ್ ಶೆಟ್ಟಿ ತಿಮರೋಡಿ ಬಣದಿಂದ ಕೃತ್ಯ

ಬೆಳ್ತಂಗಡಿ : ಬಿಜೆಪಿ ಕಾರ್ಯಕರ್ತನ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ ಬಣದವರು ಹಲ್ಲೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ಕಣಿಯೂರು ಎಂಬಲ್ಲಿ ನಡೆದಿದೆ.

ಕಣಿಯೂರು ಗ್ರಾ.ಪಂ. ಬಿಜೆಪಿ ಬೆಂಬಲಿತ ಸದಸ್ಯ ಪ್ರವೀಣ್ ಗೌಡ ಹಲ್ಲೆಗೊಳಗಾದವರು. ರಾಧಾಕೃಷ್ಣ ಗೌಡ, ಪ್ರಜ್ವಲ್, ಕಿರಣ್ ಶಿಶಿಲ ಹಾಗೂ ಇತರರು ಸೇರಿ ಹಲ್ಲೆ ಮಾಡಿರುವುದಾಗಿ ತಿಳಿದುಬಂದಿದೆ. ಇವರೆಲ್ಲ ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರು ಎಂದು ಹೇಳಲಾಗಿದೆ. ಮಾಹಿತಿ ಪ್ರಕಾರ ರಾಜಕೀಯ ವೈಮನಸ್ಸಿನಿಂದಲೇ ಈ ಹಲ್ಲೆ ನಡೆದಿದೆ ಎನ್ನಲಾಗಿದೆ.

ಕಳೆದೆರಡು ದಿನಗಳ ಹಿಂದೆ ರಾಧಾಕೃಷ್ಣ ಗೌಡ ಎಂಬವರು ವಾಟ್ಸಾಪ್ ಗ್ರೂಪ್ ಒಂದರಲ್ಲಿ ಪ್ರವೀಣ್ ಗೌಡ ಅವರ ಬಗ್ಗೆ ಅವಾಚ್ಯವಾಗಿ ನಿಂದಿಸಿ ವಾಯ್ಸ್ ಮೆಸೇಜ್ ಹಾಕಿದ್ದರು. ಇದೇ ವಿಚಾರವಾಗಿ ರಾಧಾಕೃಷ್ಣ ಅವರಲ್ಲಿ ಫೋನ್ ನಲ್ಲಿ ಪ್ರವೀಣ್ ಗೌಡ ಮಾತಿಗೆ ಮಾತು ಬೆಳೆದಿದೆ. ಇದರಿಂದ ಕುಪಿತಗೊಂಡು ಕಣಿಯೂರಿನಲ್ಲಿರುವ ಪ್ರವೀಣ್ ಗೌಡ ಅವರ ಅಂಗಡಿಗೆ ನುಗ್ಗಿ ರಾದಾಕೃಷ್ಣ ಗೌಡ ಮತ್ತು ತಂಡ ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.





































 
 

ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top