ಅಕ್ರಮ ಮರದ ದಿಮ್ಮಿ ಸಾಗಾಟ ಪತ್ತೆ ಹಚ್ಚಿದ ಅರಣ್ಯ ಸಂಚಾರಿ ದಳ

ಮಂಗಳೂರು : ಕೇರಳಕ್ಕೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನ ಸಮೇತ ರೂ. 5.50 ಲಕ್ಷ ಮೌಲ್ಯದ ಅಕೇಶಿಯ, ಮ್ಯಾಂಜಿಯಮ್ ದಿಮ್ಮಿಗಳನ್ನು ಮಂಗಳೂರಿನ ಅರಣ್ಯ ಸಂಚಾರಿ ದಳದ ವತಿಯಿಂದ ವಾಹನ ಸಮೇತ ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ.

ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಥೋನಿ ಮರಿಯಪ್ಪ ಅವರ ಮಾರ್ಗದರ್ಶನದಲ್ಲಿ ಮಂಗಳೂರು ಅರಣ್ಯ ಸಂಚಾರಿದಳ ವಲಯ ಅರಣ್ಯಾಧಿಕಾರಿ ಪ್ರಶಾಂತ್‌ ಕುಮಾ‌ರ್ ಪೈ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.

ಈ ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ ಪ್ರಶಾಂತ್, ಶಿವಾನಂದ ಮಾದರ, ನವೀನ ರಿಚರ್ಡ್ ಡಿ’ಸೋಜ ಹಾಗೂ ವಾಹನ ಚಾಲಕರಾದ ಜಯಪ್ರಕಾಶ ಭಾಗವಹಿಸಿದ್ದರು.









https://screenapp.io/app/#/shared/8P4BcrrHNx























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top