ಬಾಂಗ್ಲಾ ಹಿಂಸಾಚಾರ  : ಹಿಂದೂ ದೇವಸ್ಥಾನಗಳ ಮೇಲೆ  ಪುಂಡರು  ದಾಳಿ  

ಪ್ರಧಾನಿ ಶೇಖ್‌ ಹಸೀನಾ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ನಂತರ ಪುಂಡರು ಬಾಂಗ್ಲಾದೇಶದಲ್ಲಿರುವ ಹಿಂದೂ ದೇವಸ್ಥಾನಗಳ ಮೇಲೆ ದಾಳಿ ನಡೆಸಿ ವಿಕೃತಿ ಮೆರೆದಿದ್ದಾರೆ.

ಸೋಮವಾರ ನಡೆದ ಹಿಂಸಾಚಾರದಲ್ಲಿ 4 ಹಿಂದೂ ದೇವಸ್ಥಾನಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಹಿಂದೂ, ಬೌದ್ಧ, ಕ್ರಿಶ್ಚಿಯನ್ ಯೂನಿಟಿ ಕೌನ್ಸಿಲ್ ನಾಯಕಿ ಕಾಜೋಲ್ ದೇಬನಾಥ್ ಮಾತನಾಡಿ, ದೇಶಾದ್ಯಂತ ಕನಿಷ್ಠ 4 ಹಿಂದೂ ದೇವಾಲಯಗಳಿಗೆ ಹಾನಿಯಾಗಿದೆ ಎಂಬ ವರದಿಗಳು ಬಂದಿವೆ.









https://screenapp.io/app/#/shared/8P4BcrrHNx























 
 

ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ ನಂತರ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕೆಲವು ಹಿಂದೂ ಸಮಾಜದ ಮುಖಂಡರು ಭಯಭೀತರಾಗಿದ್ದಾರೆ ಎಂದು ಹೇಳಿದರು. ಪ್ರತ್ಯಕ್ಷದರ್ಶಿಗಳ ಪ್ರಕಾರ, ಢಾಕಾದ ಧನ್ಮಂಡಿ ಪ್ರದೇಶದಲ್ಲಿರುವ ಇಂದಿರಾಗಾಂಧಿ ಸಾಂಸ್ಕೃತಿಕ ಕೇಂದ್ರವನ್ನು ಪುಂಡರು ಧ್ವಂಸ ಮಾಡಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top