ಪುತ್ತೂರು : ಉಡುಪಿಯ ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಪ್ರೊ. ಹರಿಣಾಕ್ಷಿ ಕೇವಳ ಅವರು ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿದ ಸಂಶೋಧನ ಮಹಾಪ್ರಬಂಧಕ್ಕೆ ಪಿಹೆಚ್. ಡಿ. ಪದವಿ ಲಭಿಸಿದೆ.
ಅವರು “ದಕ್ಷಿಣ ಕನ್ನಡ ಜಿಲ್ಲೆಯ ಜನಪದ ಕಥೆಗಳಲ್ಲಿಮಹಿಳೆ” ಎಂಬ ವಿಷಯದ ಕುರಿತು ಪ್ರಬಂಧ ಮಂಡಿಸಿದ್ದರು. ಡಾ. ಹರಿಣಾಕ್ಷಿ ಕೇವಳ ಅವರು ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಸೀತಾರಾಮ ಕೇವಳ ಅವರ ಪತ್ನಿ..
ಅವರ ಹಿರಿಯ ಮಗ ಸುಜನ್ ಕೇವಳ ಉದ್ಯಮಿಯಾಗಿದ್ದು ಕಿರಿಯ ಮಗ ಸುತನ್ ಕೇವಳ ಸ್ನಾತಕೋತ್ತರ ಪತ್ರಿಕೋದ್ಯಮ ವಿದ್ಯಾರ್ಥಿಯಾಗಿದ್ದಾರೆ.
























