ಆ.22 ರಿಂದ 29 : ಪುಣ್ಚಪ್ಪಾಡಿ ವಿನಾಯಕನಗರದಲ್ಲಿ ಮದ್ಯವರ್ಜನ ಶಿಬಿರ | ಕಾರ್ಯಕ್ರಮದ ಯಶಸ್ಸಿಗಾಗಿ ನಡೆಯಿತು ಪೂರ್ವಭಾವಿ ಸಭೆ

ಕಡಬ: ಪುಣ್ಚಪ್ಪಾಡಿ ವಿನಾಯಕನಗರ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಆಶ್ರಯದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಆ.22 ರಿಂದ 29 ರ ತನಕ ವಿನಾಯಕನಗರ ಶ್ರೀ ಗೌರಿ ಸದನ ಸಭಾಂಗಣದಲ್ಲಿ ನಡೆಯುವ 1843ನೇ ಮದ್ಯವರ್ಜನ ಶಿಬಿರದ ಪೂರ್ವಭಾವಿ ಸಭೆ ಭಾನುವಾರ ಸವಣೂರಿನಲ್ಲಿ ನಡೆಯಿತು.

ಸಭೆಯಲ್ಲಿ ಕಾರ್ಯಕ್ರಮದ ಯಶಸ್ವಿಗಾಗಿ ಚರ್ಚಿಸಲಾಯಿತು. ಕಾರ್ಯಕ್ರಮದ ಯಶಸ್ಸಿಗಾಗಿ ಉಪ ಸಮಿತಿಗಳನ್ನು ರಚಿಸಲಾಯಿತು.

ಸಭಾ ವೇದಿಕೆಯಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಕಡಬ ತಾಲೂಕು ಅಧ್ಯಕ್ಷ ಮಹೇಶ್‍ ಕೆ. ಸವಣೂರು, ಸವಣೂರು ಸಿಎ ಬ್ಯಾಂಕ್‍ ಅಧ್ಯಕ್ಷ ತಾರನಾಥ ಕಾಯರ್ಗ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಶಿವರಾಮ ಗೌಡ ಮೆದು, ಪುಣ್ಚಪ್ಪಾಡಿ ಸಮರ್ಥ ಜನಸೇವಾ ಟ್ರಸ್ಟ್ ಅಧ್ಯಕ್ಷ ಗಿರಿಶಂಕರ ಸುಲಾಯ, ವಿನಾಯಕನಗರ ಗೌರಿ ಗಣೇಶ ಸೇವಾ ಟ್ರಸ್ಟ್ ಅಧ್ಯಕ್ಷ ಸಚಿನ್ ಕುಮಾರ್ ಜೈನ್, ಯೋಜನೆಯ ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ಗೌಡ ನಾವೂರು, ಸವಣೂರು ಸಿ.ಎ.ಬ್ಯಾಂಕ್‍ ಮಾಜಿ ಅಧ್ಯಕ್ಷ ಗಣೇಶ್‍ ನಿಡ್ವಣ್ಣಾಯ, ಬೆಳಂದೂರು ಗ್ರಾಮ ಪಂಚಾಯತ್‍ ಉಪಾಧ್ಯಕ್ಷ ಜಯಂತ ಅಬೀರ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ವಿಜಯ ಗೌಡ ಕುಚ್ಚೆಜಾಲು ಉಪಸ್ಥಿತರಿದ್ದರು.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top