ಪುಣ್ಚಪ್ಪಾಡಿಯಲ್ಲಿ 1843ನೇ ಮದ್ಯವರ್ಜನ ಶಿಬಿರ | ಬಿ ಸಿ ಟ್ರಸ್ಟ್ ನೆಲ್ಯಾಡಿ ವಲಯದ ಪದಾಧಿಕಾರಿಗಳು ಭಾಗಿ | ನೆಲ್ಯಾಡಿ ಶೌರ್ಯ ವಿಪತ್ತು ಘಟಕದ ಸ್ವಯಂ ಸೇವಕರ ಸಭೆ

ನೆಲ್ಯಾಡಿ: ಕಡಬ ತಾಲೂಕಿನ ಪುಣ್ಚಪ್ಪಾಡಿಯಲ್ಲಿ ನಡೆಯುತ್ತಿರುವ 1843ನೇ ಮದ್ಯವರ್ಜನ ಶಿಬಿರಕ್ಕೆ  2ನೇ ದಿನವಾದ ಅ.23ರಂದು ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ನೆಲ್ಯಾಡಿ ವಲಯದ ಎಲ್ಲಾ ಒಕ್ಕೂಟಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ಜನಜಾಗೃತಿ ವೇದಿಕೆ ಅಧ್ಯಕ್ಷರು, ಪದಾಧಿಕಾರಿಗಳು, ಶೌರ್ಯ ಘಟಕದ ಎಲ್ಲಾ ಸ್ವಯಂ ಸೇವಕರು, ವಲಯದ ಮೇಲ್ವಿಚಾರಕರು ಹಾಗೆಯೇ ವಲಯದ ಎಲ್ಲಾ ಸೇವಾಪ್ರತಿನಿಧಿಗಳು ಭೇಟಿ ನೀಡಿದರು.

ಶಿಬಿರದಲ್ಲಿ ನಡೆಯುವ ಎಲ್ಲಾ ಕೆಲಸ ಕಾರ್ಯಗಳಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ನೆಲ್ಯಾಡಿ ಶೌರ್ಯ ವಿಪತ್ತು ಘಟಕದ ಸ್ವಯಂ ಸೇವಕರ ಸಭೆಯನ್ನು ನಡೆಸಿದ್ದು, ಈ ಸಭೆಯಲ್ಲಿ ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ ಜನಜಾಗೃತಿ, ಮೇಲ್ವಿಚಾರಕ ನಿತೇಶ್, ನೆಲ್ಯಾಡಿ ವಲಯದ ಜನಜಾಗೃತಿ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್, ಜನಜಾಗೃತಿ ಸದಸ್ಯ ತುಕಾರಾಮ.ರ್ರೈ, ಮಾದೇರಿ ಒಕ್ಕೂಟದ ಅಧ್ಯಕ್ಷ ಸೆಬಾಸ್ಟಿಯನ್, ವಲಯ ಮೇಲ್ವಿಚಾರಕ ಆನಂದ.ಡಿ, ಬಿ ಘಟಕ ಪ್ರತಿನಿಧಿ ರಮೇಶ್ ಬಾಣಜಾಲು, ಘಟಕ ಸಂಯೋಜಕಿ ನಮಿತಾ ಶೆಟ್ಟಿ, ವಿಪತ್ತು ನಿರ್ವಹಣಾ ಘಟಕದ ಎಲ್ಲಾ ಸ್ವಯಂ ಸೇವಕರು ಉಪಸ್ಥಿತರಿದ್ದರು.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top