ಮೋದಿ, ಶಾ ಆಧುನಿಕ ಸರದಾರ್ ವಲ್ಲಭಬಾಯಿ ಪಟೇಲ್ | ಕ್ಯಾಂಪ್ಕೋ ಸುವರ್ಣ ಮಹೋತ್ಸವದಲ್ಲಿ ಯಡಿಯೂರಪ್ಪ

ಪುತ್ತೂರು: ಜಗತ್ತಿನ ಯಾವುದೇ ಶಕ್ತಿಗೆ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಪರಿಶ್ರಮ ಸರಿಸಾಟಿಯಿಲ್ಲ.  ಅವರು ಆಧುನಿಕ ಸರದಾರ್ ವಲ್ಲಭಬಾಯಿ ಪಟೇಲ್ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಣ್ಣಿಸಿದರು.

ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ನಡೆದ ಕ್ಯಾಂಪ್ಕೋ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೇಂದ್ರ ಸಚಿವ ಅಮಿತ್ ಶಾ ಅವರು  ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವಲ್ಲಿ ಬಹಳಷ್ಟು ಶ್ರಮಪಟ್ಟಿದ್ದಾರೆ ಎಂದು ಹೇಳಿದ  ಯಡಿಯೂರಪ್ಪ, ಕ್ಯಾಂಪ್ಕೋ ಸಂಸ್ಥೆ ಚಾಕಲೇಟ್ ಉತ್ಪಾದನೆಯೊಂದಿಗೆ ತೆಂಗಿನ ಕಲ್ಪ ತೆಂಗಿನ ಎಣ್ಣೆಯನ್ನು ಉತ್ಪಾದಿಸಿ ಮಾರ್ಕೆಟಿನಲ್ಲಿ ಉತ್ತಮ ಲಾಭ ಗಳಿಸುವತ್ತ ಮುಖ ಮಾಡಿದೆ. ಅಲ್ಲದೆ ಪರಿಸರ ಸ್ನೇಹಿ ವಿದ್ಯುತನ್ನು  ಉತ್ಪಾದಿಸಿ ಸಂಸ್ಥೆಯನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿರುವುದು ಶ್ಲಾಘನೀಯ ಎಂದರು.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top