ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ | ತೀರ್ಪು ಪ್ರಕಟಿಸಿದ ಹೈಕೋರ್ಟ್

ಧರ್ಮಸ್ಥಳ: ಭಾರೀ ಸಂಚಲನ ಮೂಡಿಸಿ ಇನ್ನೂ ನಿಗೂಢವಾಗಿ ಉಳಿದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಇದೀಗ ತೀರ್ಪು ನೀಡಿದೆ.

ಸೌಜನ್ಯ ಕೊಲೆಯಾಗಿ 12 ವರ್ಷ ಆದರೂ ಇಂದು ನ್ಯಾಯ ಸಿಕ್ಕಿಲ್ಲ. ಈ ಹಿಂದೆ ನಡೆದ ತನಿಖೆಗಳಲ್ಲಿ ಸೌಜನ್ಯಗಳಿಗೆ ಸರ್ಕಾರದ ಅಂಗ ಸಂಸ್ಥೆಗಳೇ ಅನ್ಯಾಯ ಮಾಡಿದ್ದವು. ಹೀಗಾಗಿ ಸೌಜನ್ಯ ಮರುತನಿಗೆ ಮಾಡಬೇಕು ಎನ್ನುವ ಹಕ್ಕೋತ್ತಾಯ ಜನರಿಂದ ಮೂಡಿಬಂದಿತ್ತು. ಈ ಸಂಬಂಧ ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದ ಹೋರಾಟಗಾರರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ತೀರ್ಪು ನೀಡಿದೆ.

ಸೌಜನ್ಯ ಪ್ರಕರಣವನ್ನು ಮರುತನಿಖೆ ಮಾಡಲು ಆಗುವುದಿಲ್ಲ ಎಂದು ಹೈಕೋರ್ಟ್ ನೇರವಾಗಿ ಹೇಳಿದೆ. ಈ ಮೂಲಕ ಸೌಜನ್ಯಾ ಪೋಷಕರು ಸಲ್ಲಿಸಿದ ಅರ್ಜಿ ವಜಾ ಆಗಿದ್ದು ನ್ಯಾಯ ಮರಿಚಿಕೆಯಾಗಿದೆ.





























 
 

ಧರ್ಮಸ್ಥಳದ ಸೌಜನ್ಯ ಪ್ರಕರಣವನ್ನು ಪೊಲೀಸರುಗಳು ವೈದ್ಯರುಗಳು ರಾಜಕಾರಣಿಗಳು ಮತ್ತು ಇಡೀ ವ್ಯವಸ್ಥೆ ತನಿಖೆ ಆಗದಂತೆ ನೋಡಿಕೊಂಡಿತ್ತು. ಎಲ್ಲರೂ ಸೇರಿಕೊಂಡು ಪ್ರಕರಣವನ್ನು ಮುಚ್ಚಿ ಹಾಕಿದ್ದರು. ಹಾಗಾಗಿ ಕಳೆದ 12 ವರ್ಷಗಳಿಂದಲೂ ತಮ್ಮ ಮಗಳ ಸಾವಿಗೆ ನ್ಯಾಯ ಕೊಡಿಸಲು ಸೌಜನ್ಯಾಳ ತಾಯಿ ಕುಸುಮಾವತಿ ಗಟ್ಟಿಯಾಗಿ ನಿಂತಿದ್ದಾರೆ.

ಸೌಜನ್ಯ ಪ್ರಕರಣದ ಪ್ರಾರಂಭದಿಂದ ಈ ತನಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ, ಸಂತ್ರಸ್ತ ಕುಟುಂಬದ ಬೆನ್ನಿಗೆ ನಿಂತಿದ್ದಾರೆ. ಕಾಲದಿಂದ ಕಾಲಕ್ಕೆ ಹಳ್ಳಿಯಿಂದ ಹಳ್ಳಿಗೆ ಹೊಸ ಹೊಸ ಹೋರಾಟಗಾರರು ಸೌಜನ್ಯ ಪರ ಹೋರಾಟದ ಉದ್ದೇಶಕ್ಕೆ ಬಲ ತುಂಬಿದ್ದು ಮಾಜಿ ಪೊಲೀಸ್ ಅಧಿಕಾರಿ ಗಿರೀಶ್ ಮಟ್ಟಣ್ಣನವ‌ರ್ ಈ ಪೈಕಿ ಪ್ರಮುಖ ಹೆಸರು. ಇವರೆಲ್ಲರ ಪ್ರಯತ್ನದ ಫಲವಾಗಿ ಸೌಜನ್ಯ ಪ್ರಕರಣ ಮರು ತನಿಖೆಗೆ ಹೋಗಬೇಕು ಎಂದು ಕೋರ್ಟ್ ಮೆಟ್ಟಲು ಹತ್ತಿದ್ದರು. ಆದರೆ ಕೋರ್ಟ್ ಇದೀಗ ಸೌಜನ್ಯ ಹೋರಾಟಗಾರರಿಗೆ ತುಸು ನಿರಾಸೆ ಮೂಡಿಸಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top