ಕೆಮ್ಮಾಯಿಯಲ್ಲಿ ಪ್ರಯಾಣಿಕರ ತಂಗುದಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ

ಪುತ್ತೂರು: ಕೆಮ್ಮಾಯಿಯಲ್ಲಿ ನೂತನ ಪ್ರಯಾಣಿಕರ ತಂಗುದಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಇಂದು ನಡೆಯಿತು.

ಮಾಜಿ ಶಾಸಕ ಸಂಜೀವ ಮಠಂದೂರು ಶಿಲಾನ್ಯಾಸ ನೆರವೇರಿಸಿ ಮಾತನಾಡಿ,  ಈ ಹಿಂದೆ ನಾವು ಪುತ್ತೂರು ನಗರ ಸಭೆಯ ಹಲವು ಕಡೆ ಹೈಟೆಕ್ ಬಸ್ ಪ್ರಯಾಣಿಕರ ತಂಗುದಾಣ ನಿರ್ಮಾಣ ಮಾಡಿದ್ದೆವು. ಕೆಮ್ಮಾಯಿಯಲ್ಲಿ ಈಗ  ನೇರವೇರುತ್ತಿದೆ. ಈ ಪ್ರಯಾಣಿಕರ ತಂಗುದಾಣಕ್ಕೆ ಸಹಕರಿಸುವ ಕೌಶಲ್ ಮಿಡಿಯ ಹಾಗೂ ಸುಂದರ ಪೂಜಾರಿ ಬಡಾವು ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ನಗರ ಸಭೆಯ ಅಧ್ಯಕ್ಷೆ ಲೀಲಾವತಿ ಕೃಷ್ಣನಗರ, ಉಪಾಧ್ಯಕ್ಷ ಬಾಲಚಂದ್ರ, ಸ್ಥಾಯಿ ಸಮಿತಿಯ ನಿಯೋಜಿತ ಅಧ್ಯಕ್ಷ ಸುಂದರ ಪೂಜಾರಿ ಬಡಾವು, ನಗರ ಸಭೆಯ ಮಾಜಿ ಉಪಾಧ್ಯಕ್ಷೆ ವಿದ್ಯಾ ಗೌರಿ,  ಕೌಶಲ್ ಮಿಡಿಯಾದ ಕೌಶಲ್,  ಶ್ರೀ ವಿಷ್ಣು ಯುವಕ ಮಂಡಲದ ಅಧ್ಯಕ್ಷ ದಯಾನಂದ ಗೌಡ ಕೆಮ್ಮಾಯಿ,  ಪುತ್ತೂರು ನಗರ ಮಂಡಲದ ಅಧ್ಯಕ್ಷ ಶಿವಕುಮಾರ್, ಮಹಿಳಾ ಮೋರ್ಚಾ ದ ಅಧ್ಯಕ್ಷೆ ಸ್ವರ್ಣಾಲತಾ ಹೆಗ್ಡೆ, ಬೂತ್ ಅಧ್ಯಕ್ಷ ಪ್ರಶಾಂತ್ ಕೆಮ್ಮಾಯಿ,  ನಲ್ಕ ಗೋಪಾಲಕೃಷ್ಣ ಆಚಾರ್ಯ, ಹಸೈನಾರ್ ಕೆಮ್ಮಾಯಿ, ಪಂಚಾಯತ್ ಸದಸ್ಯ ತಿಮ್ಮಪ್ಪ ಪೂಜಾರಿ. ಕೆಮ್ಮಾಯಿ ಪಾರ್ಕಿಂಗ್ ನ ರಿಕ್ಷಾ ಚಾಲಕ ಹಾಗೂ ಮಾಲಕರು  ಉಪಸ್ಥಿತರಿದ್ದರು.





























 
 

ಪ್ರಶಾಂತ್ ಕೆಮ್ಮಾಯಿ ಕಾರ್ಯಕ್ರಮ ನಿರೂಪಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top