ಮಂಗಳೂರಿನ ಬಾವುಟಗುಡ್ಡೆಯಲ್ಲಿ ದ.ಕ.ಜಿಲ್ಲೆಯಲ್ಲೇ ಅತೀ ಎತ್ತರದ ಧ್ವಜಸ್ತಂಭ ನಿರ್ಮಾಣ | ನೆರವೇರಿತು ಶಂಕುಸ್ಥಾಪನೆ

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಅತೀ ಎತ್ತರದ ಧ್ವಜಸ್ತಂಭ ನಿರ್ಮಾಣಕ್ಕೆ ಶಂಕು ಸ್ಥಾಪನೆ ಭಾನುವಾರ ಮಂಗಳೂರಿನ ಬಾವುಟ ಗುಡ್ಡೆಯಲ್ಲಿ ನಡೆಯಿತು.

ಬಾವುಟಗುಡ್ಡೆಯ ಇತಿಹಾಸವನ್ನು ಶಾಶ್ವತಗೊಳಿಸುವ ಸಲುವಾಗಿ ಧ್ವಜಸ್ತಂಭವನ್ನು ನಿರ್ಮಿಸಲು ಸ್ವಾತ್ರಂತ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿ ಅಧ್ಯಕ್ಷ ಕಿರಣ್ ಬುಡ್ಲೆಗುತ್ತು ಅವರು ಕೆಪಿಸಿಸಿ ಕಾರ್ಯಧ್ಯಕ್ಷ, ಶಾಸಕ ಮಂಜುನಾಥ ಭಂಡಾರಿ ಅವರಿಗೆ ಮನವಿ ಸಲ್ಲಿಸಿದ್ದರು. ಅದರಂತೆ ಮಂಜುನಾಥ ಭಂಡಾರಿ ಅವರು ರಾಜ್ಯ ಸರ್ಕಾರದೊಂದಿಗೆ ಮಾತನಾಡಿ ಸ್ಮಾರ್ಟ್ ಸಿಟಿವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಅತಿ ಎತ್ತರವಾದ ಧ್ವಜ ಸ್ತಂಭವನ್ನು ನಿರ್ಮಿಸುವಂತೆ ಮನವಿ ಮಾಡಿದ್ದಾರೆ.  

837ರಲ್ಲಿ ಮಂಗಳೂರನ್ನು ಕೇಂದ್ರ ಸ್ಥಾನವನ್ನಾಗಿ ಮಾಡಿ ಆಡಳಿತ ನಡೆಸುತ್ತಿದ್ದ ಬ್ರಿಟೀಷರನ್ನು ಕೆದಂಬಾಡಿ ರಾಮಯ್ಯ ಗೌಡರು ರೈತವೀರರನ್ನು ಸಂಘಟಿಸಿ ಹೋರಾಟ ಮಾಡಿ  ಬಾವುಟಗುಡ್ಡೆಯಲ್ಲಿ ಬ್ರಿಟೀಷ್ ಧ್ವಜವನ್ನು ಇಳಿಸಿ ನಮ್ಮ ದೇಶವನ್ನು ಸ್ವಾತಂತ್ರ್ಯವೆಂದು ಘೋಷಿಸಿ ಸುಮಾರು 13 ದಿವಸಗಳವರೆಗೆ ನಮ್ಮ ನೆಲದ ಕ್ರಾಂತಿಕಾರಿ ಬಾವುಟವನ್ನು ಶ್ರೀ ಕೆದಂಬಾಡಿ ರಾಮಯ್ಯ ಗೌಡರು ಏರಿಸಿದ್ದರು. ಅದರಂತೆ ಇಂದು ಬಾವುಟಗುಡ್ಡೆಯಲ್ಲಿ ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಿತು.





























 
 

ಕೆಪಿಸಿಸಿ ಕಾರ್ಯಧ್ಯಕ್ಷ, ಶಾಸಕ ಮಂಜುನಾಥ ಭಂಡಾರಿ, ಶಾಸಕ ವೇದವಾಸ್ ಕಾಮತ್, ಮಹಾನಗರ ಪಾಲಿಕೆಯ ಮಹಾಪೌರ ಸುಧೀರ್ ಶೆಟ್ಟಿ, ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ಪ್ರವೀಣ್ ಚಂದ್ರ ಆಳ್ವ, ಮಾಜಿ ಶಾಸಕ ಕೆ. ಹರೀಶ್ ಕುಮಾರ್  ಹಾಗೂ ಇನ್ನಿತರ ಮಹಾನಗರ ಪಾಲಿಕೆಯ ಸದಸ್ಯರುಗಳು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top