ನೆಲ್ಯಾಡಿ ಕಾಲೇಜು ವಿದ್ಯಾರ್ಥಿ ತೀರ್ಥೇಶ್ ನಾಪತ್ತೆ

ಪುತ್ತೂರು: ನೆಲ್ಯಾಡಿಯ ಕಾಲೇಜಿನ ವಿದ್ಯಾರ್ಥಿ ತೀರ್ಥೇಶ್ ಎಂ. ನಾಪತ್ತೆಯಾಗಿದ್ದು, ಈ ಕುರಿತು ಉಪ್ಪಿನಂಗಡಿ ಠಾಣೆಗೆ ದೂರು ನೀಡಲಾಗಿದೆ.

ಪ್ರಥಮ ವರ್ಷದ ಬಿ.ಎ. ಓದುತ್ತಿರುವ ಅರಸಿನಮಕ್ಕಿಯ ವಿದ್ಯಾರ್ಥಿ ತೀರ್ಥೇಶ್ ಮಂದಗತಿ ಚಟುವಟಿಕೆಯವನಾಗಿದ್ದು,. ಪ್ರತಿದಿನ ಮನೆಯಿಂದ ಕೆ.ಎಸ್.ಆರ್.ಟಿ.ಸಿ. ಬಸ್‌ನಲ್ಲಿ ಕಾಲೇಜಿಗೆ ಹೋಗಿ ಬರುತ್ತಿದ್ದ. ಸೆ.21ರಂದು ಕೂಡ ಬಸ್‌ ನಲ್ಲಿ ಮನೆಯಿಂದ ತೆರಳಿದ್ದಾನೆ. ಕಾಲೇಜಿನಲ್ಲಿ ವಾಲಿಬಾಲ್‌ ಪಂದ್ಯಾಟವಿದೆ ಎಂದು ತಿಳಿಸಿ, ಬಟ್ಟೆ ಬರೆಗಳನ್ನು ತೆಗೆದುಕೊಂಡು ಹೋಗಿದ್ದು, ರಾತ್ರಿಯಾದರೂ ಮನೆಗೆ ವಾಪಸ್ ಬಂದಿಲ್ಲ. ಕಾಲೇಜಿನಲ್ಲಿ ವಿಚಾರಿಸಿದಾಗ, ಸಂಜೆ 3 ಗಂಟೆಗೆ ನೆಲ್ಯಾಡಿ ಪೇಟೆಯಲ್ಲಿ ಬಸ್ಸಿಗೆ ಕಾಯುತ್ತಿರುವುದನ್ನು ಇನ್ನೋರ್ವ ವಿದ್ಯಾರ್ಥಿ ರಾಹುಲ್ ಎಂಬಾತ ನೋಡಿರುವ ಮಾಹಿತಿ ಲಭಿಸಿದೆ. ಎಲ್ಲ ಕಡೆ ಹುಡುಕಾಡಿದರೂ ಮಗನ ಸುಳಿವು ಲಭಿಸಿಲ್ಲ. ಆತನನ್ನು ಪತ್ತೆ ಮಾಡಿಕೊಡಬೇಕೆಂದು ಅರಸಿನಮಕ್ಕಿಯ ಪಡ್ಡಾಯಿಬೆಟ್ಟು ನಿವಾಸಿಯಾಗಿರುವ ತಂದೆ ಎಂ.ವಿಜಯಚಂದ್ರ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮನವಿ ಮಾಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪತ್ತೆಗಾಗಿ ತನಿಖೆ ನಡೆಸುತ್ತಿದ್ದಾರೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top