ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿ ಜಯಂತಿ ಆಚರಣೆ

ಪುತ್ತೂರು: ಬನ್ನೂರು ಕೃಷ್ಣನಗರದ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅ.2 ರಂದು ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿ ಜಯಂತಿಯನ್ನು ಆಚರಿಸಲಾಯಿತು.

ಪ್ರಾರಂಭದಲ್ಲಿ ಆಡಳಿತ ಮಂಡಳಿಯವರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿ ವೃಂದದವರು ಸೇರಿ ಶಾಲಾ ಸುತ್ತಮುತ್ತ ಸ್ವಚ್ಛತಾ ಕಾರ್ಯವನ್ನು ನಡೆಸಲಾಯಿತು.

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಇಲಾಖೆಯ ಕುಕ್ಕೆ ಸುಬ್ರಹ್ಮಣ್ಯ ಸಬ್ ಡಿವಿಷನ್ ನ ಸಹಾಯಕ ಇಂಜಿನಿಯರ್ ಪ್ರಮೋದ್ ಕುಮಾರ್  ಕೆ.ಕೆ. ಮುಖ್ಯ ಅತಿಥಿಯಾಗಿ ಪಾಲ್ಗೊಂಡು, ಗಾಂಧೀಜಿಯವರ ಸರಳತೆ ಅಹಿಂಸಾ ತತ್ವ, ತ್ಯಾಗ ಗುಣಗಳು ಹಾಗೂ ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಧೀಮಂತ ನಾಯಕತ್ವದ ಬಗ್ಗೆ ತಿಳಿಸಿದರು. ದೇಶದ ಎರಡನೇ ಪ್ರಧಾನಿಯಾಗಿದ್ದ ಲಾಲ್ ಬಹದ್ದೂರ್ ಶಾಸ್ತ್ರೀಜಿ ಯವರ ಬದುಕಿನ ಬಗೆಗೆ ತಿಳಿಸಿದರು.

































 
 

ಅಧ್ಯಕ್ಷತೆಯನ್ನು ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ವಹಿಸಿದ್ದು ಈ ಇಬ್ಬರು ಮಹನೀಯರ ಬದುಕಿನ ತತ್ವಗಳನ್ನು ಬಣ್ಣಿಸಿದರು. ನಿರ್ದೇಶಕ ಸೀತಾರಾಮ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಗುಡ್ಡಪ್ಪಗೌಡ ಬಲ್ಯ, ಉಪಾಧ್ಯಕ್ಷ ಉಮೇಶ್ ಗೌಡ ಮಲುವೇಳು, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಸೌಮ್ಯಶ್ರೀ ಹೆಗಡೆ, ಸಂಚಾಲಕ ಎ. ವಿ. ನಾರಾಯಣ ಸಾಂದರ್ಭಿಕವಾಗಿ ಮಾತನಾಡಿದರು.

ವಿದ್ಯಾರ್ಥಿಗಳಾದ ಗನ್ವಿತ್, ಅದ್ವಿಕ್ ಬಂಜನ್, ವಿಕ್ಯಾತ್, ಅನಿಕಾ ರವರು ಗಾಂಧೀಜಿ ಹಾಗೂ ಶಾಸ್ತ್ರೀಜಿ ಯವರ ಬಗ್ಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ ನಿರ್ದೇಶಕರಾದ ಪುಷ್ಪಾವತಿ ಕಳುವಾಜೆ, ಪ್ರತಿಭಾ ದೇವಿ, ವನಿತಾ ಎ.ವಿ, ಶಿಕ್ಷಕ ವೃಂದ, ಬೋಧಕೇತರ ವೃಂದ, ಪೋಷಕ ವೃಂದ, ವಿದ್ಯಾರ್ಥಿ ವೃಂದದವರು ಪಾಲ್ಗೊಂಡಿದ್ದರು.

ಪ್ರಾಂಶುಪಾಲೆ ಸವಿತಾ ಕುಮಾರಿ ಸ್ವಾಗತಿಸಿ, ಶಿಕ್ಷಕಿ ಹರ್ಷಿತ ಪ್ರಾರ್ಥನೆ ಹಾಡಿದರು. ಶಿಕ್ಷಕಿ ರೀಮಾ ಲೋಬೋ ಸಂವಿಧಾನದ ಪೂರ್ವ ಪೀಠಿಕೆ ವಾಚಿಸಿದರು. ಶಿಕ್ಷಕಿ ಪ್ರಕ್ಷುತ ವಂದಿಸಿದರು. ಶಿಕ್ಷಕಿಯರಾದ ಶ್ರೇಯ, ರಂಜಿತಾ ಕಾರ್ಯಕ್ರಮ ನಿರೂಪಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top