36 ನಕ್ಸಲರು ಎನ್‌ಕೌಂಟರ್‌ಗೆ ಬಲಿ

ರಾಯ್‌ಪುರ: ಛತ್ತೀಸ್‌ಗಢದ ನಾರಾಯಣಪುರ ಮತ್ತು ದಾಂತೇವಾಡ ಪೊಲೀಸ್ ಪಡೆಗಳು ಶುಕ್ರವಾರ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ 36 ನಕ್ಸಲರು ಬಲಿಯಾಗಿದ್ದಾರೆ. ನಾರಾಯಣಪುರ ಮತ್ತು ದಾಂತೇವಾಡ ಜಿಲ್ಲೆಗಳ ಗಡಿಯಲ್ಲಿರುವ ಅಬುಜ್‌ಮದ್ ಪ್ರದೇಶದ ದಟ್ಟ ಅರಣ್ಯದಲ್ಲಿ ಭಾರಿ ಎನ್‌ಕೌಂಟರ್‌ ನಡೆದಿದ್ದು, ಕನಿಷ್ಠ 36 ನಕ್ಸಲರನ್ನು ಸಾಯಿಸಲಾಗಿದೆ. ಅಲ್ಲಿ ಇನ್ನೂ ಶೋಧ ಕಾರ್ಯಾಚರಣೆ ಮುಂದುವರಿದಿದೆ.
ನಾರಾಯಣಪುರ-ದಾಂತೇವಾಡ ಅಂತರ್‌ಜಿಲ್ಲಾ ಗಡಿಯಲ್ಲಿರುವ ಅಬುಜ್‌ಮದ್ ಅರಣ್ಯದಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುಂಡಿನ ಚಕಮಕಿ ನಡೆಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹತ್ಯೆಯಾದ ಮಾವೋವಾದಿಗಳ ದೇಹಗಳು ಮತ್ತು ಅವರ ಬಳಿ ಎಕೆ -47 ರೈಫಲ್ ಮತ್ತು ಒಂದು ಎಸ್‌ಎಲ್‌ಆರ್ (ಸೆಲ್ಫ್-ಲೋಡಿಂಗ್ ರೈಫಲ್) ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top