ಅಕ್ಷಯ ಕಾಲೇಜಿನಲ್ಲಿ ಗಾಂಧಿ ಜಯಂತಿ, ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆ

ಪುತ್ತೂರು:  ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ  ಘಟಕ ಗಳು,  ಕಾಲೇಜಿನ ಆಂತರಿಕ ಗುಣಮಟ್ಟದ ಭರವಸೆ ಕೋಶದ  ಸಹಭಾಗಿತ್ವದಲ್ಲಿ ಮತ್ತು ಆರ್ಯಾಪು  ಪಂಚಾಯತ್ ಸಹಕಾರದೊಂದಿಗೆ  ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆಯನ್ನು ಪಂಚಾಯಿತಿನ ಸಭಾಂಗಣದಲ್ಲಿ ಆಚರಿಸಲಾಯಿತು. 

ಆರ್ಯಾಪು  ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗೇಶ್ ಕುಮಾರ್   ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಆಚರಣೆಯ ಮಹತ್ವವನ್ನು ತಿಳಿಸಿದರು .

ಪಂಚಾಯತ್ ಸದಸ್ಯರು , ಸ್ಥಳೀಯ ನಾಗರಿಕರು, ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳು, ಸಹ ಯೋಜನಾಧಿಕಾರಿಗಳು  ಮತ್ತು ರಾಷ್ಟ್ರೀಯ ಸೇವಾ  ಯೋಜನಾ ಸ್ವಯಂ ಸೇವಕ, ಸೇವಕಿಯರು ಪಾಲ್ಗೊಂಡರು .

































 
 

ಕಾರ್ಯಕ್ರಮದ ಅಂಗವಾಗಿ ಸಂಪ್ಯ ಪರಿಸರದಲ್ಲಿ ಸ್ವಚ್ಛತಾ ಅಭಿಯಾನ  ಮಾಡಲಾಯಿತು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top