ಕಲಾವಿದ ಗುಡ್ಡಪ್ಪ ಬಲ್ಯರಿಗೆ ರಾಮನಗರ ಶ್ರೀ ಶಾರದೋತ್ಸವ ಸಮಿತಿಯಿಂದ ಸನ್ಮಾನ

ಉಪ್ಪಿನಂಗಡಿ: ರಾಮನಗರದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಮತ್ತು ಸೌಹಾರ್ದ ಯಕ್ಷಗಾನ ಸಮಿತಿ  ಸಹಯೋಗದಲ್ಲಿ  ಶ್ರೀ ಶಾರದಾ ಕಲಾಮಂಟಪ ಜರಗಿದ 30ನೇ ವರ್ಷದ ಶ್ರೀ ಶಾರದೋತ್ಸವ  ಕಾರ್ಯಕ್ರಮದಲ್ಲಿ ಉಪನ್ಯಾಸಕ ಅರ್ಥಧಾರಿ ಗುಡ್ಡಪ್ಪ ಬಲ್ಯರನ್ನು ಸನ್ಮಾನಿಸಲಾಯಿತು.

 ಸೌಹಾರ್ದ ಯಕ್ಷಗಾನ ಸಮಿತಿಯ ಅಧ್ಯಕ್ಷ ಉಮೇಶ ಶೆಣೈ.ಯನ್, ಶಾರದೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ  ರಾಮಚಂದ್ರ ಮಣಿಯಾಣಿ, ಅಧ್ಯಕ್ಷ ಚಂದ್ರಶೇಖರ ಮಡಿವಾಳ, ಖಜಾಂಜಿ ಕಂಗ್ವೆ ವಿಶ್ವನಾಥ ಶೆಟ್ಟಿ ಗುಡ್ಡಪ್ಪ ಬಲ್ಯರನ್ನು ಸನ್ಮಾನಿಸಿದರು.

ಕಾರ್ಯದರ್ಶಿ ದೀಪಕ್ ಪೈ, ಸಹ ಕಾರ್ಯದರ್ಶಿ ಗಣೇಶ್ ಭಂಡಾರಿ, ಭೂಸೇನೆಯ ಮಾಜಿ ಯೋಧ ವಿಶ್ವನಾಥ ಶೆಣೈ, ಹಿರೇಬಂಡಾಡಿ  ಪ್ರೌಢಶಾಲಾ ಮುಖ್ಯ ಶಿಕ್ಷಕ ಕೆ. ಶ್ರೀಧರ ಭಟ್, ಜಯಂತ ಪುರೋಳಿ, ಹರಿರಾಮಚಂದ್ರ, ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.



































 
 

 ಸನ್ಮಾನಕ್ಕೆ ಪ್ರತಿಕ್ರಿಯಿಸಿದ ಗುಡ್ಡಪ್ಪ ಬಲ್ಯ ತನ್ನ ಯಕ್ಷಗಾನ ಆಸಕ್ತಿಯನ್ನು ಗುರುತಿಸಿ ಪ್ರೋತ್ಸಾಹಿಸಿದ  ಗುರುಹಿರಿಯರಿಗೆ ಸಂದ ಗೌರವ ಎಂದು ತಿಳಿಸಿದರು.

 ಕಲಾವಿದ ಹರೀಶ್ ಆಚಾರ್ಯ ಬಾರ್ಯ ಅಭಿನಂದನಾ ನುಡಿಗಳಾನ್ನಡಿದರು. ನಿವೃತ್ತ ಉಪನ್ಯಾಸಕ  ಮಹಾಲಿಂಗೇಶ್ವರ ಭಟ್ ಪೆರಿಯಡ್ಕ ಸನ್ಮಾನ ಪತ್ರ ವಾಚಿಸಿದರು. ಕಾಳಿಕಾಂಬ ಯಕ್ಷಗಾನ ಸಂಘದ ಕಾರ್ಯದರ್ಶಿ ಶ್ರೀಪತಿ ಭಟ್ ಸ್ವಾಗತಿಸಿ ಉಪಾಧ್ಯಕ್ಷ ಸಂಜೀವ ಪಾರೆಂಕಿ ವಂದಿಸಿದರು. ಸೌಹಾರ್ದ ಯಕ್ಷಗಾನ ಸಮಿತಿ ಸಂಚಾಲಕ ದಿವಾಕರ ಆಚಾರ್ಯ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top