ಅಕ್ರಮ ದನ ಸಾಗಾಟ ಸ್ಥಳಕ್ಕೆ ಪೊಲೀಸರಿಂದ ದಾಳಿ : ಆರೋಪಿಗಳು ಪರಾರಿ

ಬೆಳ್ಳಾರೆ: ಅಕ್ರಮ ದನ ಸಾಗಾಟ ಮಾಡಲು ಯತ್ನಿಸುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿದ ಘಟನೆ ಸುಳ್ಯ ತಾಲೂಕು ಕಲ್ಮಡ್ಕ ಗ್ರಾಮದ ಮುಚ್ಚಿಲ ಎಂಬಲ್ಲಿ ನಡೆದಿದೆ.

ಸ್ಕ್ರಿಪ್ಟ್ ಕಾರೊಂದರಲ್ಲಿ ಅಕ್ರಮವಾಗಿ ದನಗಳನ್ನು ತುಂಬಿಸಿ ಸಾಗಾಟ ಮಾಡಲು ಪ್ರಯತ್ನಿಸುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬೆಳ್ಳಾರೆ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಈರಯ್ಯ ಡಿ.ಎನ್. ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ತೆರಳಿದಾಗ ರಸ್ತೆ ಬದಿಯಲ್ಲಿ ಬಿಳಿ ಬಣ್ಣದ ಕಾರೊಂದು ನಿಂತಿದ್ದು, ಕಾರನ್ನು ಪರಿಶೀಲಿಸಿದಾಗ ಕಾರಿನೊಳಗೆ ಹಿಂಸಾತ್ಮಕವಾಗಿ ಮೂರು ದನಗಳನ್ನು ತುಂಬಿಸಿರುವುದು ಕಂಡು ಬಂದಿದೆ. ಕಾರು ನಿಲ್ಲಿಸಿದ ಸ್ಥಳದಿಂದ ಸ್ವಲ್ಪ ದೂರದಲ್ಲಿರುವ ತೆರೆದ ದನದ ಕೊಟ್ಟಿಗೆಯಲ್ಲಿಯೂ 2 ಜಾನುವಾರುಗಳು ಕಂಡುಬಂದಿದ್ದು ಜಾನುವಾರುಗಳನ್ನು ಮೂರು ಜನರು ಬಿಚ್ಚಲು ಪ್ರಯತ್ನಿಸುತ್ತಿದ್ದ ಸಂದರ್ಭ ಪೊಲೀಸರನ್ನು ಕಂಡು ಪರಾರಿಯಾಗಿದ್ದಾರೆ.

ಕೊಟ್ಟಿಗೆಯಲ್ಲಿದ್ದ ದನಗಳನ್ನು ಹಾಗೂ ಕಾರಿನಲ್ಲಿದ್ದ ಜಾನುವಾರುಗಳನ್ನು ಮಾಂಸ ಮಾಡುವ ಉದ್ದೇಶಕ್ಕಾಗಿ ಅಕ್ರಮವಾಗಿ ಸಾಗಾಟ ಮಾಡಲು ಪ್ರಯತ್ನಿಸುತ್ತಿರುವುದು ಕಂಡು ಬಂದಿದೆ. ಈ ಕುರಿತು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top