ಫೆ.20 : ಪುತ್ತೂರು ತಹಶೀಲ್ದಾರ್‍ ರಮೇಶ್‍ ಬಾಬು ಅವರಿಂದ ಕೆದಂಬಾಡಿಯಲ್ಲಿ ಗ್ರಾಮವಾಸ್ತವ್ಯ

ಪುತ್ತೂರು : ಪುತ್ತೂರು ತಾಲೂಕು ತಹಶೀಲ್ದಾರ್‍ ರಮೇಶ್‍ ಬಾಬು ಅವರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಫೆ.20 ಸೋಮವಾರ ಕೆದಂಬಾಡಿ ಗ್ರಾಪಂ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ ಸಹಿತ ಇನ್ನಿತರ ಇಲಾಖೆಗಳ ವಿವಿಧ ಸವಲತ್ತುಗಳನ್ನು ವಿತರಿಸಲಾಗುವುದು. ಪುತ್ತೂರು ತಾಲೂಕಿನ ಎಲ್ಲಾ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಭೆಯಲ್ಲಿ ತಮ್ಮ ಇಲಾಖೆಯಿಂದ ಸಾರ್ವಜನಿಕರಿಗೆ ಒದಗಿಸುವ ಸವಲತ್ತುಗಳ ಮಾಹಿತಿ ನೀಡಲಾಗುವುದು. ಅಲ್ಲದೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಅರ್ಜಿ, ಮಾಹಿತಿಯನ್ನು ಪಡೆದು ಅರ್ಹ ಪ್ರಕರಣವನ್ನು ಸ್ಥಳದಲ್ಲೇ ಇತ್ಯರ್ಥಪಡಿಸಲು ಕ್ರಮಕೈಗೊಳ್ಳಲಾಗುವುದು.

ಆದ್ದರಿಂದ ಕೆದಂಬಾಡಿ ಗ್ರಾಮದ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸದುಪಯೋಗಪಡಿಸಿಕೊಳ್ಳಬೇಕೆಂದು ತಹಶೀಲ್ದಾರ್‍ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top