ಜಿಲ್ಲಾ ಮಟ್ಟದ ಜ್ಞಾನ-ವಿಜ್ಞಾನ ಮೇಳ | ನರಿಮೊಗರು ಸಾಂದೀಪನಿ ಸಂಸ್ಥೆಯ ವಿದ್ಯಾರ್ಥಿಗಳಾದ ವಾಹಿನ್ ರೈ, ಅಜಿತೇಶ್‍ ಜಿ.ಎನ್. ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ಅಖಿಲ ಭಾರತೀಯ ವಿದ್ಯಾಭಾರತಿ ಕರ್ನಾಟಕ ಹಾಗೂ ಸಾಂದೀಪನಿ ವಿದ್ಯಾಸಂಸ್ಥೆಯ ಸಹಯೋಗದಲ್ಲಿ ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ಸಾಂದೀಪನಿ ವಿದ್ಯಾಲಯದ ವಿದ್ಯಾರ್ಥಿ 9ನೇ ತರಗತಿಯ ವಾಹಿನ್ ರೈ ಗಣಿತ ವಸ್ತು ಪ್ರದರ್ಶನದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅವರು ರಾಕೇಶ್ ರೈ ಕಡೆಂಜಿ ಮತ್ತು ದೀಪಿ ಆರ್ ರೈ ಪುತ್ರ.

9ನೇ ತರಗತಿಯ ಅಜಿತೇಶ್ ಜಿ. ಎನ್. ಕೈ ಮಾಡೆಲಿಂಗ್ ನಲ್ಲಿ ಪ್ರಥಮ ಸ್ಥಾನದೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅವರು ಜತ್ತಪ್ಪ ಗೌಡ ಮತ್ತು ಬೇಬಿ ರೇಖಾ ನೈತಾಡಿ ದಂಪತಿ ಪುತ್ರ.

ವಿದ್ಯಾರ್ಥಿಗಳನ್ನು ಶಾಲಾ ಸಂಚಾಲಕ ಭಾಸ್ಕರ್ ಆಚಾರ್ ಹಿಂದಾರ್, ಮುಖ್ಯ ಶಿಕ್ಷಕಿ ಜಯಮಾಲಾ ವಿ ಎನ್ ರವರು ಅಭಿನಂದಿಸಿದ್ದಾರೆ.





































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top