ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರನ್ನು ಸುಲಿಗೆ ಮಾಡಿದರೆ ಪರ್ಮಿಟ್‌ ರದ್ದು

ಟಿಕೆಟ್‌ ದರ ಹೆಚ್ಚಿಸಿ ಪ್ರಯಾಣಿಕರನ್ನು ಸುಲಿಗೆ ಮಾಡುವ ಬಸ್‌ ಮಾಲೀಕರಿಗೆ ಕಠಿಣ ಎಚ್ಚರಿಕೆ

ಬೆಂಗಳೂರು : ಹಬ್ಬ, ಸಾಲು ಸಾಲು ರಜೆಗಳು ಬಂದ ಸಂದರ್ಭದಲ್ಲಿ ಟಿಕೆಟ್‌ ದರ ಹೆಚ್ಚಿಸಿ ಜನರನ್ನು ಸುಲಿಗೆ ಮಾಡುವ ಖಾಸಗಿ ಬಸ್‌ ಮಾಲೀಕರಿಗೆ ಸರಕಾರ ಖಡಕ್‌ ಎಚ್ಚರಿಕೆ ನೀಡಿದೆ.

ಈಗ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ತಿಂಗಳಾಂತ್ಯ ಹಾಗೂ ನವೆಂಬರ್‌ ಮೊದಲ ವಾರದಲ್ಲಿ ಸಾಲುಸಾಲು ರಜೆಗಳಿದ್ದು, ಖಾಸಗಿ ಬಸ್‌ಗಳ ಟಿಕೆಟ್‌ ದರ ದುಪ್ಪಟ್ಟು ಆಗಿದೆ. ಇದಕ್ಕೆ ರಾಜ್ಯ ಸಾರಿಗೆ ಇಲಾಖೆ ಕಡಿವಾಣ ಹಾಕಲು ಮುಂದಾಗಿದ್ದು, ದೀಪಾವಳಿ ಹಬ್ಬದ ಪ್ರಯುಕ್ತ ಆನ್‌ಲೈನ್ ಮೂಲಕ ಟಿಕೆಟ್ ದರವನ್ನು ಹೆಚ್ಚಿಸಿದರೆ ಕಠಿಣ ಕ್ರಮಕೈಗೊಳ್ಳುವುದಾಗಿ ಖಾಸ್ ಬಸ್ ಮಾಲೀಕರಿಗೆ ಎಚ್ಚರಿಕೆ ನೀಡಿದೆ.







































 
 

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ರಾಜ್ಯ ಸಾರಿಗೆ ಇಲಾಖೆ, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಆನ್‌ಲೈನ್ ಟಿಕೆಟ್ ದರವನ್ನು ಹೆಚ್ಚಿಸಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜನರಿಂದ ಸಾಮಾನ್ಯ ಟಿಕೆಟ್ ದರಕ್ಕಿಂತ ಹೆಚ್ಚು ಸಂಗ್ರಹಿಸಬಾರದು. ದುಪ್ಪಟ್ಟು ಹಣ ಸಂಗ್ರಹಿಸುವ ಬಸ್‌ಗಳ ಪರ್ಮಿಟ್ ಹಾಗೂ ನೋಂದಣಿ ಪತ್ರ ಅಮಾನತು ಮಾಡಲಾಗುವುದು ಎಂದು ಖಾಸಗಿ ಬಸ್ ಮಾಲೀಕರಿಗೆ ಖಡಕ್ ಎಚ್ಚರಿಕೆ ನೀಡಿದೆ.
ಸಾರ್ವಜನಿಕ ಸೇವಾ ವಾಹನಗಳಲ್ಲಿ ಸ್ಪೋಟಕ ಸಾಮಗ್ರಿಗಳ ಸಾಗಾಣಿಕೆಗೆ ‌ನಿಷೇಧಿಸಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿರುವ ಸಾರಿಗೆ ಇಲಾಖೆ, ಖಾಸಗಿ ಬಸ್‌ಗಳು ಹೆಚ್ಚಿನ ಟಿಕೆಟ್ ದರ ವಸೂಲು ಮಾಡಿದರೆ ಸಾರ್ವಜನಿಕರು ದೂರು ನೀಡುವಂತೆ ಮನವಿ ಮಾಡಿದೆ. ನಿಯಂತ್ರಣ ಕೊಠಡಿ ಸಂಖ್ಯೆ-9449863429/9449863426 ಕೆರೆ ಮಾಡಿ ಸಾರ್ವಜನಿಕರು ದೂರು ಸಲ್ಲಿಸಬಹುದು ಎಂದು ರಾಜ್ಯ ಸಾರಿಗೆ ಇಲಾಖೆ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ಆದರೆ ಪ್ರತಿಸಲ ಹಬ್ಬ ಬಂದಾಗ ಖಾಸಗಿ ಬಸ್‌ಗಳು ಪ್ರಯಾಣಿಕರನ್ನು ಸುಲಿಗೆ ಮಾಡುತ್ತಿವೆ. ಸಾರಿಗೆ ಇಲಾಖೆ ಕೆಲ ಬಸ್‌ಗಳನ್ನು ತಪಾಸಣೆ ನಡೆಸಿ ದಂಡ ವಿಧಿಸಿ ಸುಮ್ಮನಾಗುತ್ತಿದೆ. ಖಾಸಗಿ ಬಸ್‌ಗಳು ಮಾತ್ರ ಸಾರಿಗೆ ಇಲಾಖೆ ಎಚ್ಚರಿಕೆಗೆ ಯಾವುದೇ ರೀತಿಯಲ್ಲೂ ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂಬ ಅರೋಪವಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top