ರಾಷ್ಟ್ರಪಿತ ಮಹಾತ್ಮಾ ಗಾಂಧಿ ಪುತ್ತೂರು ಗಾಂಧಿಕಟ್ಟೆಗೆ ಆಗಮಿಸಿ 90 ವರ್ಷ ಪೂರೈಕೆ | ಮುಂದಿನ ಒಂದು ವರ್ಷಗಳ ಕಾರ್ಯಕ್ರಮಕ್ಕೆ ಜಸ್ಟೀಸ್ ಸಂತೋಷ್ ಹೆಗ್ಡೆಯವರಿಂದ ಚಾಲನೆ

ಪುತ್ತೂರು :; ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರು ದೇಶದ ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಪುತ್ತೂರಿಗೆ ಆಗಮಿಸಿ ಪ್ರಸ್ತುತ ವರ್ಷಕ್ಕೆ 90 ವರ್ಷ ಪೂರೈಸಿದ್ದು, ಈ  ಸಂಭ್ರಮದಲ್ಲಿ ಒಂದು ವರ್ಷ ನಿರಂತರವಾಗಿ ಕಾರ್ಯಕ್ರಮಗಳು ಆಯೋಜಿಸಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಒಂದು ವರ್ಷಗಳ ಕಾರ್ಯಕ್ರಮಳಿಗೆ ಭಾನುವಾರ ಪುತ್ತೂರಿನ ಗಾಂಧಿ ಕಟ್ಟೆಯಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ .ಚಾಲನೆ ನೀಡಲಾಯಿತು.

ನಿವೃತ್ತ ಲೋಕಾಯುಕ್ತ ಜಸ್ಟೀಸ್ ಎನ್.ಸಂತೋಷ್ ಹೆಗ್ಡೆ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಚಾಲನೆ ನೀಡಿದರು. ಗಾಂಧೀ ವಿಚಾರ ವೇದಿಕೆ ಪುತ್ತೂರು ಹಾಗೂ ಮಹಾತ್ಮ ಗಾಂಧೀ ಶಾಂತಿ ಪ್ರತಿಷ್ಠಾನದ ಸಹಯೋಗದಲ್ಲಿ ಒಂದು ವರ್ಷ ನಿರಂತರ ಕಾರ್ಯಕ್ರಮ ನಡೆಯಲಿದೆ.

ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ, ವಿಧಾನ ಪರಿಷತ್ ಮಾಜಿ ಸದಸ್ಯ, ಗಾಂಧಿ ವಿಚಾರ ವೇದಿಕೆ ಮಾತೃ ಘಟಕದ ಉಪಾಧ್ಯಕ್ಷ ಅಣ್ಣಾ ವಿನಯ ಚಂದ್ರ, ಗಾಂಧೀ ವಿಚಾರ ವೇದಿಕೆ ಅಧ್ಯಕ್ಷ ಕ್ಸೇವಿಯರ್ ಡಿ ಸೋಜ, ಮಾತೃ ಘಟಕದ ಅಧ್ಯಕ್ಷ ಶ್ರೀಧರ ಬಿಡೆ, ನ್ಯಾಯವಾದಿ ಜಗನ್ನಿವಾಸರಾವ್, ಗಾಂಧೀ ಕಟ್ಟೆ ಸಮಿತಿಯ ಸಯ್ಯದ್ ಕಮಲ್ ಸಹಿತ ಹಲವು ಮಂದಿ ಉಪಸ್ಥಿತರಿದ್ದರು. ಗಾಂಧೀಕಟ್ಟೆ ಸಮಿತಿ ಸಂಚಾಲಕ ಕೃಷ್ಣಪ್ರಸಾದ್ ಆಳ್ವ ಸ್ವಾಗತಿಸಿದರು. ರಮೇಶ್ ಬಾಬು ವಂದಿಸಿದರು.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top